ಪ್ರಮುಖ ಸುದ್ದಿ
ಕಲಬುರಗಿ : ನಾಡಪಿಸ್ತೂಲ್ ಹೊಂದಿದ್ದ ಇಬ್ಬರ ಬಂಧನ!
ಕಲಬುರಗಿ : ಅಕ್ರಮವಾಗಿ ನಾಡ ಪಿಸ್ತೂಲು ಇಟ್ಟುಕೊಂಡಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ಅಶೋಕ್ ನಗರ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದು ಅಫಜಲಪುರ ತಾಲೂಕಿನ ಕೋಗನೂರು ಗ್ರಾಮ ಮೂಲದ ಹಸನಸಾಬ್ ಮತ್ತು ಲಕ್ಷ್ಮೀಕಾಂತ್ ರನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳ ಬಳಿಯಿದ್ದ 1 ನಾಡ ಪಿಸ್ತೂಲು , 3 ಜೀವಂತ ಗುಂಡುಗಳನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ. ಅಶೋಕ ನಗರ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.