ಪ್ರಮುಖ ಸುದ್ದಿ

ಪ್ರಮಾಣ ವಚನ ಕಾರ್ಯಕ್ರಮಕ್ಕೆ ಮಾಜಿ ಮುಖ್ಯಮಂತ್ರಿಗಳಿಗೆ ಆಹ್ವಾನ ನೀಡಿದ ಬಿಎಸ್ ವೈ

ಬೆಂಗಳೂರು: ಇಂದು ಸಂಜೆ 6ಗಂಟೆಯಿಂದ 6:15ರ ಒಳಗೆ ರಾಜಭವನದ ಗಾಜಿನ ಮನೆಯಲ್ಲಿ ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಿ ಪ್ರತಿಜ್ಞಾ ವಿಧಿ ಸ್ವೀಕರಿಸಲಿದ್ದಾರೆ. ಪ್ರಮಾಣ ವಚನ ಕಾರ್ಯಕ್ರಮಕ್ಕೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಸಿದ್ಧರಾಮಯ್ಯ ಅವರನ್ನು ಆಹ್ವಾನಿಸುವುದಾಗಿ ಬಿ.ಎಸ್.ಯಡಿಯೂರಪ್ಪ ಮಾಧ್ಯಮಗಳಿಗೆ ಹೇಳಿದ್ದಾರೆ. ಅಂತೆಯೇ ಪತ್ರದ ಮೂಲಕವೂ ಈ ಬಗ್ಗೆ ಆಹ್ವಾನ ನೀಡುವುದಾಗಿ ಅವರು ತಿಳಿಸಿದ್ದು ಸಂಸದರು, ಶಾಸಕರು, ವಿಧಾನ ಪರಿಷತ್ ಸದಸ್ಯರು, ರಾಜ್ಯ ಸಭಾ ಸದಸ್ಯರು ಸೇರಿ ಇತರೆ ಗಣ್ಯರನ್ನೂ ಆಹ್ವಾನಿಸುವುದಾಗಿ ಅವರು ತಿಳಿಸಿದ್ದಾರೆ. ಒಟ್ಟು ಮೂರು ಸಾವಿರ ಪಾಸ್ ಗಳನ್ನು ವಿತರಿಸಲು ಸಿದ್ಧತೆ ನಡೆದಿದೆ ಎಂದು ತಿಳಿದು ಬಂದಿದೆ.

Related Articles

Leave a Reply

Your email address will not be published. Required fields are marked *

Back to top button