ಪ್ರಮುಖ ಸುದ್ದಿ
ಪ್ರಮಾಣ ವಚನ ಕಾರ್ಯಕ್ರಮಕ್ಕೆ ಮಾಜಿ ಮುಖ್ಯಮಂತ್ರಿಗಳಿಗೆ ಆಹ್ವಾನ ನೀಡಿದ ಬಿಎಸ್ ವೈ
ಬೆಂಗಳೂರು: ಇಂದು ಸಂಜೆ 6ಗಂಟೆಯಿಂದ 6:15ರ ಒಳಗೆ ರಾಜಭವನದ ಗಾಜಿನ ಮನೆಯಲ್ಲಿ ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಿ ಪ್ರತಿಜ್ಞಾ ವಿಧಿ ಸ್ವೀಕರಿಸಲಿದ್ದಾರೆ. ಪ್ರಮಾಣ ವಚನ ಕಾರ್ಯಕ್ರಮಕ್ಕೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಸಿದ್ಧರಾಮಯ್ಯ ಅವರನ್ನು ಆಹ್ವಾನಿಸುವುದಾಗಿ ಬಿ.ಎಸ್.ಯಡಿಯೂರಪ್ಪ ಮಾಧ್ಯಮಗಳಿಗೆ ಹೇಳಿದ್ದಾರೆ. ಅಂತೆಯೇ ಪತ್ರದ ಮೂಲಕವೂ ಈ ಬಗ್ಗೆ ಆಹ್ವಾನ ನೀಡುವುದಾಗಿ ಅವರು ತಿಳಿಸಿದ್ದು ಸಂಸದರು, ಶಾಸಕರು, ವಿಧಾನ ಪರಿಷತ್ ಸದಸ್ಯರು, ರಾಜ್ಯ ಸಭಾ ಸದಸ್ಯರು ಸೇರಿ ಇತರೆ ಗಣ್ಯರನ್ನೂ ಆಹ್ವಾನಿಸುವುದಾಗಿ ಅವರು ತಿಳಿಸಿದ್ದಾರೆ. ಒಟ್ಟು ಮೂರು ಸಾವಿರ ಪಾಸ್ ಗಳನ್ನು ವಿತರಿಸಲು ಸಿದ್ಧತೆ ನಡೆದಿದೆ ಎಂದು ತಿಳಿದು ಬಂದಿದೆ.