ಪ್ರಮುಖ ಸುದ್ದಿ

ತಣ್ಣಗಾದ ತಿಪ್ಪಾರೆಡ್ಡಿ : ಅನರ್ಹ ಶಾಸಕರಿಗೆ ಕೊಟ್ಟಮಾತಿನಂತೆ ಮಂತ್ರಿಗಿರಿ‌ ಕೊಡಬೇಕು!!

ಚಿತ್ರದುರ್ಗ : ಮಂತ್ರಿಗಿರಿ ಕೈತಪ್ಪಿದ ಹಿನ್ನೆಲೆ ನೂತನ ಸಚಿವರ ಪ್ರಮಾಣ ವಚನ ಸಮಾರಂಭಕ್ಕೆ ಗೈರಾಗಿ ಅಸಮಾಧಾನ ವ್ಯಕ್ತಪಡಿಸಿದ್ದ ಚಿತ್ರದುರ್ಗದ ಬಿಜೆಪಿ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಸದ್ಯ ತಣ್ಣಗಾಗಿದ್ದಾರೆ. ಇಂದು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು ಇಷ್ಟಪಟ್ಟಿದ್ದೆಲ್ಲವೂ ಪಡೆಯುವುದು ಸಾಧ್ಯವಿಲ್ಲ. ಇನ್ನೂ ಸಾಕಷ್ಟು ಅವಕಾಶಗಳಿವೆ, ಸಿಎಂ ಯಡಿಯೂರಪ್ಪ ಅವರು ಅವಕಾಶ ಕಲ್ಪಿಸುವುದಾಗಿ ತಿಳಿಸಿದ್ದಾರೆ. ನಮ್ಮದು ಶಿಸ್ತಿನ ಪಕ್ಷವಾಗಿದ್ದು ನಮ್ಮಲ್ಲಿ ಯಾವುದೇ ಭಿನ್ನಮತವಿಲ್ಲ. ಬದಲಾಗಿ ನಮ್ಮ ಅಭಿಪ್ರಾಯಗಳನ್ನು ನಾಯಕರಿಗೆ ತಿಳಿಸಿದ್ದೇವೆ ಅಂದಿದ್ದಾರೆ. ಅಂತೆಯೇ ಅನರ್ಹಗೊಂಡಿರುವ ಶಾಸಕರು ಬಿಜೆಪಿಗಾಗಿ ದೊಡ್ಡ ಕೊಡುಗೆ ನೀಡಿದ್ದಾರೆ. ಅವರಿಗೆ ಕೊಟ್ಟ ಮಾತಿನಂತೆ ಮಂತ್ರಿಗಿರಿ ಕೊಡಲೇಬೇಕಾಗುತ್ತದೆ ಎಂದಿದ್ದಾರೆ.

ನೂತನ ಸಚಿವರ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಗೈರಾಗಿದ್ದ ಹಿರಿಯ ಶಾಸಕ ತಿಪ್ಪಾರೆಡ್ಡಿ ಹತ್ತಾರು ಶಾಸಕರು ಅಸಮಾಧಾನಗೊಂಡಿದ್ದು ಸಭೆ ಸೇರಿ ಚರ್ಚಿಸುತ್ತೇವೆಂದಿದ್ದರು. ಅವರ ಬೆಂಬಲಿಗರು ಬೈಕಿಗೆ ಬೆಂಕಿಯಿಟ್ಟು ಆಕ್ರೋಶ ವ್ಯಕ್ತಪಡಿಸಿದ್ದರು.

Related Articles

Leave a Reply

Your email address will not be published. Required fields are marked *

Back to top button