ಪ್ರಮುಖ ಸುದ್ದಿ
ಬ್ಯಾಡ್ಮಿಂಟನ್ ಚಾಂಪಿಯನ್ ಸಿಂಧುಗೆ 5ಲಕ್ಷ ರೂಪಾಯಿ ಬಹುಮಾನ – ಸಿಎಂ ಬಿಎಸ್ ವೈ
ನವದೆಹಲಿ : ಇಂಡಿಯಾದ ಬ್ಯಾಡ್ಮಿಂಟನ್ ಆಟಗಾರ್ತಿ ಪಿ.ವಿ.ಸಿಂಧು ಇದೇ ಮೊದಲ ಬಾರಿಗೆ ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್ ಶಿಪ್ ಮುಡಿಗೇರಿಸಿಕೊಂಡಿದ್ದಾರೆ. ಆ ಮೂಲಕ ಬ್ಯಾಡ್ಮಿಂಟನ್ ವಿಶ್ವರಾಣಿಯಾಗಿ ಮೆರೆದ ಭಾರತದ ಮೊದಲ ಕ್ರೀಡಾಪಟು ಎಂಬ ಗೌರವಕ್ಕೆ ಪಾತ್ರವಾಗಿದ್ದಾರೆ. ಇಂದು ಜಪಾನಿನ ನೋಜೊಮಿ ಓಕುಹರಾ ಅವರನ್ನು 21-7, 21-7ರ ಅಂತರದಿಂದ ಮಣಿಸುವ ಮೂಲಕ ಇತಿಹಾಸ ಪುಟ ಸೇರಿದ್ದಾರೆ. ಭಾರತ ಕೀರ್ತಿ ಪತಾಕೆ ಹಾರಿಸಿದ ಕ್ರೀಡಾಪಟು ಸಿಂಧುಗೆ ರಾಜ್ಯ ಸರ್ಕಾರದಿಂದ 5ಲಕ್ಷ ರೂಪಾಯಿನೀಡುವುದಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಘೋಷಿಸಿದ್ದಾರೆ.