ಭೂ ತಿದ್ದುಪಡಿ ಕಾಯ್ದೆ ಹಿಂಪಡೆಗೆ ಆಗ್ರಹಿಸಿ ರೈತರ ಪ್ರತಿಭಟನೆ
ಭೂ ತಿದ್ದುಪಡಿ ಕಾಯ್ದೆ ಹಿಂಪಡೆಗೆ ಆಗ್ರಹಿಸಿ ರೈತರ ಪ್ರತಿಭಟನೆ
yadgiri, ಶಹಾಪುರಃ ರಾಜ್ಯ ಸರ್ಕಾರ ಭೂ ಕಾಯ್ದೆಯನ್ನು ತಿದ್ದುಪಡಿ ಮಾಡುವ ಮೂಲಕ ಬಂಡವಾಳಶಾಹಿಗಳಿಗೆ ಮಣೆ ಹಾಕುತ್ತಿದೆ ಎಂದು ಆರೋಪಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ನಗರದಲ್ಲಿ ಪ್ರತಿಭಟನಾ ಮೆರವಣಿಗೆ ಮೂಲಕ ತಹಶೀಲ್ದಾರ ಕಚೇರಿಗೆ ತೆರಳಿ ಮನವಿ ಪತ್ರ ಸಲ್ಲಿಸಿದರು.
ಭೂ ತಿದ್ದುಪಡಿ ಕಾಯ್ದೆ ಜಾರಿಯಿಂದ ರಾಜ್ಯದ ಬಡವರ ಕೊರಳಿಗೆ ರಾಜ್ಯ ಬಿಜೆಪಿ ಸರ್ಕಾರ ಉರುಳು ಹಾಕುತ್ತಿದೆ. ಇದೊಂದು ಕರಾಳ ಕಾಯ್ದೆ, ಕೂಡಲೆ ಭೂ ಕಾಯ್ದೆ ತಿದ್ದುಪಡಿಯನ್ನು ಕೈಬಿಟ್ಟು, ರೈತರ ಹಿತ ಕಾಪಾಡಬೇಕೆಂದು ಕಾರ್ಯಕರ್ತರು ಒತ್ತಾಯಿಸಿದರು.
ಸದಾ ರೈತರು ಬೆನ್ನೆಲಬು ಎನ್ನವ ಜನ ಪ್ರತಿನಿಧಿಗಳು, ರಾಜ್ಯದ ಮುಖ್ಯಮಂತ್ರಿಗಳು ರೈತರ ಹಿತಾಶಕ್ತಿಯನ್ನು ಬದಿಗೊತ್ತಿ, ಸಮಗ್ರ ರೈತರನ್ನೆ ಕಾರ್ಮಿಕರನ್ನಾಗಿಸುವ ಹುನ್ನಾರದಲ್ಲಿಯೇ ಎಂಬ ಸಂಶಯ ಮೂಡುತ್ತಿದೆ. ಕೂಡಲೇ ನೂತನ ತಿದ್ದುಪಡಿ ಭೂಕಾಯ್ದೆ ವಾಪಸ್ ಪಡೆಯದಿದ್ದರೆ ರಾಜ್ಯದಾದ್ಯಂತ ರೈತರು ಪ್ರತಿಭಟನೆಗೆ ಇಳಿಯಲಿದ್ದಾರೆ ಎಂದು ಪ್ರತಿಭಟನಾಕಾರರು ಎಚ್ಚರಿಕೆ ನೀಡಿದರು.
ರೈತ ಸಂಘದ ಜಿಲ್ಲಾಧ್ಯಕ್ಷ ಮಹೇಶಗೌಡ ಸುಬೇದಾರ, ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹಾದೇವಿ, ಗೌರವಧ್ಯಕ್ಷ ಶಾಂತರಡ್ಡಿ ಬಿಜಾಸ್ಪೂರ, ತಾಲೂಕಾ ಅಧ್ಯಕ್ಷ ಸಂಗಣ್ಣ ಮುಡಬೂಳ, ಶಿವರಾಮ, ಶಿವರಡ್ಡಿ ಸಗರ, ಗೋವಿಂದ ಪತ್ತಾರ, ಬಸವರಾಜ ಬೂದಿಹಾಳ, ಲಕ್ಷ್ಮೀಕಾಂತ ಕೊಳ್ಳೂರ, ಶಿವಲಿಂಗಯ್ಯ ಸ್ವಾಮಿ ಸೇರಿದಂತೆ ಇತರರಿದ್ದರು.