ಕಥೆ

ಅಗಲಿಕೆ-ಅನಿವಾರ್ಯ ಈ ಕಥೆ ಓದಿ

ಅಗಲಿಕೆ-ಅನಿವಾರ್ಯ

ಒಂದು ಜಾಲಿಯ ಮರ.
ಅದರ ಮೈತುಂಬ ಮುಳ್ಳು. ಯಾರೂ ಅದರ ಬಳಿ ಸುಳಿಯುತ್ತಿರಲಿಲ್ಲ.
ಒಂಟಿ ಜೀವನ ಮರಕ್ಕೆ ಬೇಸರವಾಯಿತು.

ಯಾರಾದರೂ ಅತಿಥಿಗಳು ಬರಬಹುದು ಎಂದು ದಾರಿ ಕಾಯುತ್ತಿತ್ತು.
ಒಂದು ದಿನ ರಾತ್ರಿ ಒಂದು ಪಕ್ಷಿಯು ಆ ಮರದ ಮೇಲೆ ಬಂದು ಕುಳಿತಿತು.
ಮರಕ್ಕೆ ಹಿಡಿಸಲಾರದಷ್ಟು ಸಂತಸವಾಯಿತು ‘ಅತಿಥಿ ದೇವೋಭವ’ ಎಂದು ಈ ಪಕ್ಷಿಯನ್ನು ಗೌರವಾದರಗಳಿಂದ ಉಪಚರಿಸಿ ಆಶ್ರಯವನ್ನಿತ್ತಿತು. ಪಕ್ಷಿಯು ಸಂತಸದಿಂದ ರಾತ್ರಿಯನ್ನು ಕಳೆದು ಬೆಳಗಾಗುತ್ತಲೇ ಹೊರಟು ನಿಂತಿತು.
ಮಿತ್ರನೇ, ನೀನು ನನ್ನ ಕೂಡ ಇಲ್ಲಿಯೇ ಇದ್ದು ಬಿಡು ಎಂದು ಮರವು ಪಕ್ಷಿಗೆ ವಿನಂತಿಸಿತು.

ಪಕ್ಷಿ ಹೇಳಿತು – “ದೇವರು ನನಗೆ ಹಾರಲು ಪಕ್ಕಗಳನ್ನು ಕೊಟ್ಟಿದ್ದಾನೆ.
ನಿನಗೆ ಸ್ಥಿರವಾಗಿರಲು ಬೇರನ್ನು ಕೊಟ್ಟಿದ್ದಾನೆ.
ನಾನು ಹಾರುತ್ತಿರಲೇಬೇಕು. ನೀನು ಒಂದು ಕಡೆ ಸ್ಥಿರವಾಗಿರಲೇಬೇಕು.

ಅದುವೇ ಜೀವನದ ರೀತಿ. ಮತ್ತೆ ಎಂದಾದರೂ ಸಮಯ ಸಿಕ್ಕಾಗ ನಾನು ಬರುತ್ತೇನೆ.
ನಿನ್ನ ಉಪಕಾರವನ್ನು ನಾನು ಎಂದೂ ಮರೆಯಲಾರೆ.” ಎಂದು ಹೇಳಿ ಪಕ್ಷಿ ಹಾರಿ ಹೋಯಿತು.

ಮರವು ಇನ್ನೂ ಮಿತ್ರನ ದಾರಿ ಕಾಯುತ್ತಲಿದೆ.
ನಾವು ಕೂಡಿದಾಗ ಸುಖಿಸಬೇಕು.
ಅಗಲಿದಾಗ ಕೂಡಿದ ಸುಖವನ್ನು ಸ್ಮರಿಸುತ್ತ ಸಂತಸದಿಂದಿರಬೇಕು.

🖊️ಸಂಗ್ರಹ🖋️
ಡಾ.ಈಶ್ವರಾನಂದ ಸ್ವಾಮೀಜಿ.
📞 – 9341137882

Related Articles

Leave a Reply

Your email address will not be published. Required fields are marked *

Back to top button