ಬೆಳ್ಳಂಬೆಳಗ್ಗೆ ರಾಜ್ಯಾದ್ಯಂತ ಲೋಕಾಯುಕ್ತ ದಾಳಿ – 12 ಜನ ಅಧಿಕಾರಿಗಳಿಗೆ ಸೇರಿದ 55 ಕಡೆಗಳಲ್ಲಿ ತಲಾಶ್

ಬೆಂಗಳೂರು: ಲೋಕಾಯುಕ್ತ ಅಧಿಕಾರಿಗಳು ಇಂದು (ಶುಕ್ರವಾರ) ಬೆಳ್ಳಂಬೆಳಗ್ಗೆ ರಾಜ್ಯಾದ್ಯಂತ ದಾಳಿ ಮಾಡಿದ್ದಾರೆ. 12 ಜನ ಅಧಿಕಾರಿಗಳಿಗೆ ಸೇರಿದ 55 ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ, ತಪಾಸಣೆ ನಡೆಸಿದ್ದಾರೆ. ಬೆಂಗಳೂರು ನಗರದ ಆರು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಇಬ್ಬರು, ಶಿವಮೊಗ್ಗ ಜಿಲ್ಲೆಯ ಇಬ್ಬರು, ಯಾದಗಿರಿ, ತುಮಕೂರಿನಲ್ಲಿ ತಲಾ ಓರ್ವ ಅಧಿಕಾರಿ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಎಲ್ಲೆಲ್ಲಿ.? ಯಾರಿಗೆ ಲೋಕಾ ಬಲೆ? ತುಮಕೂರು: ಮುದ್ದುಕುಮಾರ್ ಅಡಿಷನಲ್ ಡೈರೆಕ್ಟರ್ ಇಂಡಸ್ಟ್ರಿ ಆ್ಯಂಡ್ ಕಾಮರ್ಸ್ ಡಿಪಾರ್ಟ್ಮೆಂಟ್ ಯಾದಗಿರಿ: ಬಲವಂತ್ ಯೋಜನ ನಿರ್ದೇಶಕ, ಯಾದಗಿರಿ ಜಿಲ್ಲಾ ಪಂಚಾಯತ್ ಬೆಂಗಳೂರು ಗ್ರಾಮಾಂತರ: ಸಿದ್ದಪ್ಪ, ಹಿರಿಯ ಪಶು ವೈದ್ಯ ದೊಡ್ಡಬಳ್ಳಾಪುರ ಬೆಂಗಳೂರು ಗ್ರಾಮಾಂತರ : ನರಸಿಂಹ ಮೂರ್ತಿ ಕೆ. ಮುನ್ಸಿಪಲ್ ಅಡ್ಮಿನಿಸ್ಟ್ರೇಷನ್ ಸರ್ವಿಸ್ ಕಮೀಷನರ್ ಹೆಬ್ಬಗೋಡಿ ಬೆಂಗಳೂರು ಸಿಟಿ: ಬಿವಿ ರಾಜ, ಎಫ್ಡಿಎ, ಕೆಐಎಡಿಬಿ ಬೆಂಗಳೂರು ಸಿಟಿ: ರಮೇಶ್ ಕುಮಾರ್, ಜಂಟಿ ಆಯುಕ್ತ ವಾಣಿಜ್ಯ ತೆರಿಗೆ ಇಲಾಖೆ ಬೆಂಗಳೂರು ಸಿಟಿ: ಅಕ್ತರ್ ಅಲಿ, ಡೆಪ್ಯೂಟಿ ಕಂಟ್ರೋಲರ್ ಮಾಪನಾ ಇಲಾಖೆ ಶಿವಮೊಗ್ಗ: ಸಿ ನಾಗೇಶ್, ಅಂತರಗಂಗೆ ಗ್ರಾಮ ಪಂಚಾಯತ್ ಅಧ್ಯಕ್ಷ ಭದ್ರಾವತಿ ಶಿವಮೊಗ್ಗ ಪ್ರಕಾಶ್: ಡೆಪ್ಯೂಟಿ ಡೈರೆಕ್ಟರ್, ತೋಟಗಾರಿಕಾ ಇಲಾಖೆ ಬೆಂಗಳೂರು ಸಿಟಿ: ಚೇತನ್ ಕುಮಾರ್, ಕಾರ್ಮಿಕಇಲಾಖೆ ಅಧಿಕಾರಿ ಮಂಡ್ಯ ವಿಭಾಗ ಬೆಂಗಳೂರು ಸಿಟಿ: ಆನಂದ್ ಸಿ ಎಲ್, ಕಮಿಷನರ್ ಮಂಗಳೂರು ಮಹಾನಗರ ಪಾಲಿಕೆ ಬೆಂಗಳೂರು ಸಿಟಿ: ಮಂಜುನಾಥ್ ಟಿ ಆರ್, ಎಫ್ಡಿಎ ಬೆಂಗಳೂರು ನಾರ್ತ್ ಸಬ್ ಡಿವಿಷನ್ ಆಫೀಸರ್