Homeಜನಮನಪ್ರಮುಖ ಸುದ್ದಿ

‘ನನಗೆ ಕೊಟ್ಟಿದ್ದನ್ನ ಬಡ್ಡಿ ಸಮೇತ ತೀರಿಸದಿದ್ದರೆ ನಾನು ದೇವೇಗೌಡರ ಮಗನೇ ಅಲ್ಲ’- ಹೆಚ್.ಡಿ ರೇವಣ್ಣ

ಹಾಸನ: ನನಗೆ ಕೊಟ್ಟಿದ್ದನ್ನ ಬಡ್ಡಿ ಸಮೇತ ತೀರಿಸದಿದ್ದರೆ ನಾನು ದೇವೇಗೌಡರ ಮಗನೇ ಅಲ್ಲ ಎಂದು ಮಾಜಿ ಸಚಿವ ಹೆಚ್.ಡಿ ರೇವಣ್ಣ ವಾಗ್ದಾಳಿ ನಡೆಸಿದರು.

ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, 2023ರ ಚುನಾವಣೆಯಲ್ಲಿ ಹಾಸನದಲ್ಲಿ ಐವತ್ತು ಸಾವಿರ ವೋಟಿಗೆ ಒಂದು ವೋಟು ಕಡಿಮೆಯಾದರೆ ರಾಜೀನಾಮೆ ಕೊಡ್ತಿನಿ ಅಂಥ ಚಾಲೆಂಜ್ ಹಾಕಿದ್ದರು. ಆ ಚುನಾವಣೆಗೆ ಸ್ವರೂಪ್ ನಿಲ್ಲಲು ಪ್ರಯತ್ನಪಟ್ಟ, ಆ ಚುನಾವಣೆಯಲ್ಲಿ ನನ್ನ ಹೆಂಡತಿಯನ್ನು ನಿಲ್ಲಿಸಲು ನಾನೇನು ದಡ್ಡನಲ್ಲ. ನಾನೇ ಅವರನ್ನು ಬಿಟ್ಟಿದ್ದೆ, ರೇವಣ್ಣನೇ ಬಂದು ನಿಲ್ಲಲಿ ಎಂದಾಗ ಯಾರನ್ನಾದರೂ ಬಿಡಬೇಕಲ್ಲ. ಅದಕ್ಕೆ ಸ್ವರೂಪ್ ಅವರನ್ನೇ ನಿಲ್ಲಿಸಬೇಕಾಯಿತು ಎಂದಿದ್ದಾರೆ.

ದೇವೇಗೌಡರು, ಕುಮಾರಣ್ಣ, ರೇವಣ್ಣ ನಿಮ್ಮಂತಹ ಪುಣ್ಯಾತ್ಮರಿಂದ ಉಳಿದಿದ್ದಾರೆ. ಪಾಪ ಪ್ರಜ್ವಲ್‌ಗೂ ಗೊತ್ತಾಗಲ್ಲ, ಅವನು ಒಳ್ಳೆಯ ಹುಡುಗ. ನಮ್ಮ ದುಡ್ಡು ತಗೊಂಡು ಅದನ್ನು ತಗೊಂಡು ಬೇರೆ ಎಲ್ಲೋ ಹಾಕಿದ್ದರು. ಅವರೆಲ್ಲಾ ನನ್ನ ಕೈಗೆ ಸಿಗದೇ ಎಲ್ಲಿಗೆ ಹೋಗುತ್ತಾರೆ. ಇನ್ನೂ ಮೂರು ವರ್ಷ ಬಡ್ಡಿ ಸಮೇತ ತೀರಿಸದಿದ್ದರೆ ನಾನು ದೇವೆಗೌಡರ ಮಗನೇ ಅಲ್ಲ ಎಂದು ತಿರುಗೇಟು ನೀಡಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button