RCB ವಿಜಯೋತ್ಸವ ವೇಳೆ ದುರ್ಘಟನೆಃ 11 ಕ್ಕೂ ಹೆಚ್ಚು ಸಾವು ಹಲವರು ಅಸ್ವಸ್ಥ
ಆರ್ ಸಿಬಿ ವಿಜಯೋತ್ಸವ ವೇಳೆ ದುರ್ಘಟನೆ

RCB ವಿಜಯೋತ್ಸವಃ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತಕ್ಕೆ 11 ಬಲಿ, ಹಲವರು ಅಸ್ವಸ್ಥ
ವಿವಿ ಡೆಸ್ಕ್ಃ ರಾಯಲ್ ಚಾಲೆಂಜರ್ಸ್ ಬೆಂಗಳೂರ ತಂಡದ ಐಪಿಎಲ್ ಗೆಲುವಿನ ಸಂಭ್ರಮಾಚರಣೆ ಹಿನ್ನೆಲೆ ರಾಜಧಾನಿಯ ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಅಪಾರ ಅಭಿಮಾನಿ ಬಳಗವೇ ಹರಿದು ಬಂದಿದೆ.
ಅತೀ ಹೆಚ್ಚಿನ ಸಂಖ್ಯೆಯಲ್ಲಿ ಅಭಿಮಾನಿಗಳು ಸೇರಿದ್ದರಿಂದ ಕ್ರೀಡಾಂಗಣದ ಗೇಟ್-6ರಲ್ಲಿ ಕಾಲ್ತುಳಿತ ಉಂಟಾಗಿ ನಾಲ್ವರು ಮೃತಪಟ್ಟಿದ್ದು, 25 ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿದ್ದಾರೆ ಎಂದು ಹೇಳಲಾಗಿದೆ.

ಚಿನ್ನಸ್ವಾಮಿ ಕ್ರೀಡಾಂಗಣದ ಒಳ ಹೋಗುವ ವೇಳೆ ಈ ಘಟನೆ ನಡೆದಿದ್ದು ನೂಕು ನುಗ್ಗಲು ಉಂಟಾದ ಪರಿಣಾಮ ಕಾಲ್ತುಳಿತಕ್ಕೆ ಓರ್ವ ಸಾವನ್ನಪ್ಪಿದ್ದು ಹಲವರು ಅಸ್ವಸ್ಥಗೊಂಡಿದ್ದಾರೆ ಎನ್ನಲಾಗಿದೆ.
ಇನ್ನು ವಿಧಾನಸೌಧದ ಬಳಿ ಆಟಗಾರರಿಗೆ ಅಭಿನಂದನಾ ಸಮಾರಂಭ ಆಯೋಜಿಸಿದ್ದು ಜನಸಾಗರವೇ ಸೇರಿದೆ.
ಸ್ಟೇಡಿಯಂ ಭರ್ತಿಯಾದ ಹಿನ್ನೆಲೆ ಗೇಟ್ ಬಂದ ಮಾಡಲಾಗಿತ್ತು. ಈ ವೇಳೆ ಅಭಿಮಾನಿಗಳ ನೂಕುನುಗ್ಗಲು ಉಂಟಾಗಿದ್ದು, ಅಪಾರ ಸಂಖ್ಯೆಯಲ್ಲಿ ನೆರೆದಿದ್ದ ಅಭಿಮಾನಿಗಳು ಒಳಗೆ ನುಗ್ಗಲು ಯತ್ನಿಸಿದಾಗ ಗೇಟ್ ಒಂದು ಕುಸಿದು ಬಿದ್ದಿದೆ. ಗಾಯಾಳುಗಳನ್ನು ಕೂಡಲೇ ಪೊಲೀಸರು ಬೌರಿಂಗ್ ಆಸ್ಪತ್ರೆಗೆ ರವಾನೆ ಮಾಡಿದ್ದಾರೆ. ಒಟ್ಟು ಇಲ್ಲಿವರೆಗೆ 11 ಜನ ಅಭಿಮಾನಿಗಳು ವಿಜಯೋತ್ಸವ ಆಚರಣೆಯಲ್ಲಿ ಭಾಗವಹಿಸಲು ಬಂದು ಜೀವ ಕಳೆದುಕೊಂಡಿದ್ದಾರೆ.