ಪ್ರಮುಖ ಸುದ್ದಿ

ವಿಕೋಪಕ್ಕೆ ತಿರುಗಿದ ಪ್ರತಿಭಟನೆ : ಐಜಿಪಿ ಹೇಮಂತ್ ನಿಂಬಾಳ್ಕರ್ ಕಾರಿಗೆ ಬೆಂಕಿ!

ಕಾರವಾರ: ಹಿಂದೂ ಕಾರ್ಯಕರ್ತ ಪರೇಶ್ ಮೆಸ್ತಾ ಸಾವಿನ ಪ್ರಕರಣವನ್ನು ಖಂಡಿಸಿ ಬಿಜೆಪಿ ಹಾಗೂ ಹಿಂದೂ ಸಂಘಟನೆಗಳು ಇಂದು ಕಾರವಾರ್ ಬಂದ್ ಗೆ ಕರೆ ನೀಡಿದ್ದವು. ಪ್ರತಿಭಟನೆಯಲ್ಲಿ ಭಾರೀ ಜನ ಸೇರಿದ್ದು ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಅಲ್ಲದೆ ಪ್ರತಿಭಟನಾಕಾರರು ರಾಷ್ಟ್ರೀಯ ಹೆದ್ದಾರಿ 66ನ್ನು ತಡೆದು ಧರಣಿ ನಡೆಸಿದ್ದರು. ಕೂಡಲೇ ಪರೇಶ್ ಮೆಸ್ತಾ ಸಾವಿನ ಪ್ರಕರಣದ ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿದ್ದರು. ಈ ಸಂದರ್ಭದಲ್ಲಿ ಹೆದ್ದಾರಿಯಲ್ಲಿ ಆಗಮಿಸಿದ ಅಗ್ನಿಶಾಮಕ ದಳದ ವಾಹನದ ಮೇಲೆ ಪ್ರತಿಭಟನಾಕಾರರು ಕಲ್ಲು ತೂರಾಟ ನಡೆಸಿದ್ದಾರೆ.

ಮತ್ತೊಂದು ಕಡೆ ಕುಮಟಾದಲ್ಲೂ ತೀವ್ರ ಪ್ರತಿಭಟನೆ ನಡೆದಿದ್ದು  ಪ್ರತಿಭಟನಾಕಾರರು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಸ್ಥಳಕ್ಕೆ ಐಜಿಪಿ ಹೇಮಂತ ನಿಂಬಾಳ್ಕರ್ ಭೇಟಿ ನೀಡಿದ್ದಾರೆ. ಆದರೆ, ಪಟ್ಟಣದ ಮಾಸ್ತಿಕಟ್ಟಾ ವೃತ್ತದ ಸಮೀಪ ಐಜಿಪಿ ಹೇಮಂತ್ ನಿಂಬಾಳ್ಕರ್ ಕಾರಿಗೆ ಪ್ರತಿಭಟನಾಕಾರರು ಬೆಂಕಿ ಹಚ್ಚಿದ ಘಟನೆ ನಡೆದಿದೆ.

Related Articles

Leave a Reply

Your email address will not be published. Required fields are marked *

Back to top button