ಹೆತ್ತ ಮಕ್ಕಳನ್ನೇ ಹತ್ಯೆಗೈದ ಅಪ್ಪ ತಾನೂ ನೇಣಿಗೆ ಶರಣು!
ಕಲಬುರಗಿ: ಇಬ್ಬರು ಗಂಡು ಮಕ್ಕಳನ್ನು ಬಾವಿಗೆಸೆದು ಕೊಂದಿರುವ ತಂದೆ ತಾನೂ ಹೊಲದಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಹೃದಯವಿದ್ರಾವಕ ಘಟನೆ ಚಿಂಚೋಳಿ ತಾಲೂಕಿನ ಹುಡದಹಳ್ಳಿ ಗ್ರಾಮದಲ್ಲಿ ನಡೆದಿದೆ. ಸಂಜೆ ವೇಳೆ ದುರ್ಘಟನೆ ನಡೆದಿದೆ ಎಂದು ತಿಳಿದು ಬಂದಿದ್ದು ರಂಗಯ್ಯ(30) ಹಾಗೂ ಪುತ್ರರಾದ ಶಿವಕುಮಾರ್ (05), ಶ್ರೀಕಾಂತ್ (02) ಮೃತರು ಎಂದು ಗುರುತಿಸಲಾಗಿದೆ.
ಹೆತ್ತ ತಂದೆಯೇ ಪುಟ್ಟ ಕಂದಮ್ಮಗಳನ್ನು ಬಾವಿಗೆಸೆದು ಹತ್ಯೆ ಮಾಡಿ ತಾನೂ ಆತ್ಮಹತ್ಯೆಗೆ ಶರಣಾಗಿದ್ದು ಇಡೀ ಗ್ರಾಮವನ್ನು ಬೆಚ್ಚಿ ಬೀಳಿಸಿದೆ. ಮಹಿಳೆಯರು, ಮಕ್ಕಳು, ಮೃತರ ಸಂಭಂಧಿಕರು ಹಾಗೂ ಗ್ರಾಮಸ್ಥರಲ್ಲಿ ದುಖ: ಮಡುಗಟ್ಟಿದೆ. ಮೂವರ ಸಾವಿನ ಸುದ್ದಿ ತಿಳಿಯುತ್ತಿದ್ದಂತೆಯೇ ಸುಲೆಪೇಟ್ ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆದರೆ, ಮಕ್ಕಳನ್ನು ಕೊಂದು ತಂದೆ ರಂಗಪ್ಪ ಆತ್ಮಹತ್ಯೆಗೆ ಶರಣಾಗಲು ನಿಖರವಾದ ಕಾರಣವೇನೆಂಬುದು ಈವರೆಗೆ ತಿಳಿದು ಬಂದಿಲ್ಲ. ಪೊಲೀಸರ ತನಿಖೆ ಬಳಿಕವಷ್ಟೇ ಈ ಘಟನೆಗೆ ಕಾರಣವೇನೆಂಬುದು ತಿಳಿದು ಬರಬೇಕಿದೆ.