ಪ್ರಮುಖ ಸುದ್ದಿ
ಇದು ದೇವೇಗೌಡ, ಕುಮಾರಸ್ವಾಮಿಗೂ ಗೊತ್ತು – ಸಿಎಂ ಸಿದ್ಧರಾಮಯ್ಯ ವಾಗ್ಬಾಣ!
ಹಾಸನ : ಜೆಡಿಎಸ್ ಪಕ್ಷಕ್ಕೆ ದಕ್ಷಿಣದ ಐದು ಜಿಲ್ಲೆಗಳಲ್ಲಿ ಮಾತ್ರ ಶಕ್ತಿಯಿದೆ. ಹೀಗಾಗಿ, ಜೆಡಿಎಸ್ ಯಾವುದೇ ಕಾರಣಕ್ಕೂ ಸ್ವಂತ ಶಕ್ತಿ ಮೇಲೆ ರಾಜ್ಯದಲ್ಲಿ ಅಧಿಕಾರ ಹಿಡಿಯಲು ಸಾಧ್ಯವಿಲ್ಲ. ಇದು ದೇವೇಗೌಡರು ಮತ್ತು ಕುಮಾರಸ್ವಾಮಿಗೂ ಗೊತ್ತು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದ್ದಾರೆ.
ನಗರದಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಜೆಡಿಎಸ್ ನಾಯಕರ ವಿರುದ್ಧ ಸಿಎಂ ಸಿದ್ಧರಾಮಯ್ಯ ವಾಗ್ದಾಳಿ ನಡೆಸಿದರು. ಜೆಡಿಎಸ್ ಗೆ ಮತ ಹಾಕಿದರೆ ಪರೋಕ್ಷವಾಗಿ ಬಿಜೆಪಿಗೆ ಮತ ಹಾಕಿದಂತಾಗುತ್ತದೆ. ಕಾಂಗ್ರೆಸ್ ಪಕ್ಷವನ್ನು ಅಧಿಕಾರದಿಂದ ದೂರವಿಟ್ಟು ಬಿಜೆಪಿ ಜೊತೆ ಅಧಿಕಾರ ಹಂಚಿಕೊಳ್ಳುವ ಹುನ್ನಾರ ಜೆಡಿಎಸ್ ನವರದ್ದು ಎಂದು ಆರೋಪಿಸಿದ್ದಾರೆ.