ಪ್ರಮುಖ ಸುದ್ದಿ

ಭೀಕರ ಅಪಘಾತ : ದಂಪತಿ ಹಾಗೂ ಇಬ್ಬರು ಮಕ್ಕಳು ಸಾವು!

ಮಂಡ್ಯ : ಬೆಂಗಳೂರು – ಮೈಸೂರು ಹೆದ್ದಾರಿಯ ಗೆಜ್ಜಲಗೆರೆ ಗ್ರಾಮದ ಸಮೀಪ ಅಪಘಾತವಾಗಿ ನಿಂತಿದ್ದ ಕಾರಿಗೆ ಡಿಕ್ಕಿ ತಪ್ಪಿಸಲೆತ್ನಿಸಿದ ಕಾರು ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿ ಆಗಿದೆ. ವೇಗವಾಗಿದ್ದ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಪಕ್ಕದ ರಸ್ತೆಗೆ ಹಾರಿ ಬಿದ್ದ ಪರಿಣಾಮ ಎದುರಿಗೆ ಬರುತ್ತಿದ್ದ ಸಾರಿಗೆ ಬಸ್ ಗೆ ಡಿಕ್ಕಿಯಾಗಿದೆ. ಪರಿಣಾಮ ಕಾರಿನಲ್ಲಿದ್ದ ದಂಪತಿ ಹಾಗೂ ಇಬ್ಬರು ಮಕ್ಕಳು ಸಾವಿಗೀಡಾದ ದಾರುಣ ಘಟನೆ ನಡೆದಿದೆ.

ಮಂಡ್ಯ ತಾಲೂಕಿನ ಹೆಬ್ಬಕವಾಡಿ ಗ್ರಾಮದ ರವಿ(31),  ಪತ್ನಿ ಮಂಜುಳಾ (28) ಮಕ್ಕಳಾದ ಸಾಗರ್(8) ಮತ್ತು ಸುಕನ್ಯಾ(6) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಬೆಂಗಳೂರಿನಲ್ಲಿ ವಾಸವಾಗಿದ್ದ ಕುಟುಂಬ ಇಂದು ಗ್ರಾಮಕ್ಕೆ ಮರಳುವ ಸಂದರ್ಭದಲ್ಲಿ ದುರ್ಘಟನೆ ಸಂಭವಿಸಿದೆ. ಮದ್ದೂರು ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

Related Articles

Leave a Reply

Your email address will not be published. Required fields are marked *

Back to top button