ಪ್ರಮುಖ ಸುದ್ದಿ
ಝೀ ಕನ್ನಡ ವಾಹಿನಿಯ ವಾಹನ ಪಲ್ಟಿ, ಚಾಲಕ ಸಾವು, 15ಜನರಿಗೆ ಗಾಯ
ತುಮಕೂರು: ಜಿಲ್ಲೆಯ ಶಿರಾ ಪಟ್ಟಣದ ಬಳಿ ಝೀ ಕನ್ನಡ ವಾಹಿನಿಯ ಸರಿಗಮಪ ಕಳೆದ ಸೀಸನ್ ನ ಗಾಯಕರು ತೆರಳುತ್ತಿದ್ದ ವಾಹನ ಪಲ್ಟಿಯಾಗಿದೆ. ಪರಿಣಾಮ ವಾಹನದ ಚಾಲಕ ಕುಮಾರ್ (27) ಸ್ಥಳದಲ್ಲೇ ಸಾವಿಗೀಡಾಗಿದ್ದಾನೆ. ವಾಹನದಲ್ಲಿದ್ದ 15ಜನರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಶಿರಾ ತಾಲೂಕು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಚಿತ್ರದುರ್ಗದಿಂದ ಬೆಂಗಳೂರಿಗೆ ತೆರಳುತ್ತಿದ್ದ ಮಾರ್ಗ ಮದ್ಯೆ ರಸ್ತೆ ಅಪಘಾತ ಸಂಭವಿಸಿದೆ. ವಿಷಯ ತಿಳಯುತ್ತಿದ್ದಂತೆ ಶಿರಾ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಶಿರಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸ್ ತನಿಖೆಯಿಂದ ಅಪಘಾತಕ್ಕೆ ನಿಖರವಾದ ಕಾರಣ ಏನೆಂಬುದು ತಿಳಿದು ಬರಬೇಕಿದೆ.