ಪ್ರಮುಖ ಸುದ್ದಿ
ರಸ್ತೆ ಅಪಘಾತ ಬೈಕ್ ಸವಾರರಿಬ್ಬರ ಸಾವು
ರಸ್ತೆ ಅಪಘಾತ ಬೈಕ್ ಸವಾರರಿಬ್ಬರ ಸಾವು
ಕಲ್ಬುರ್ಗಿಃ ನಿನ್ನೆ ಗುರುವಾರ ರಾತ್ರಿ ರಸ್ತೆ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಸಾವನ್ನಪ್ಪಿದ ಘಟನೆ ಚಿತಾಪುರ ಸಮೀಪ ನಡೆದಿದೆ.
ಟಂಟಂ ಆಟೋ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರರಿಬ್ಬರು ಘಟನಾ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಈ ಘಟನೆ ಚಿತಾಪುರ ಸಮೀಪ ನಡೆದಿದ್ದು, ಚಿತಾಪುರ ತಾಲೂಕಿನ ಅಲ್ಲೂರ(ಬಿ) ಗ್ರಾಮದ ಮಹಾದೇವ ಅಳ್ಳದ (45) ಮತ್ತು ಮನೋಹರ ರಾಠೋಡ ಎಂಬುವರೇ ಮೃತ ದುರ್ದೈವಿಗಳಾಗಿದ್ದಾರೆ ಎಂದು ಗುರುತಿಸಲಾಗಿದೆ.
ಘಟನಾ ಸ್ಥಳಕ್ಕೆ ಚಿತಾಪುರ ಸಿಪಿಐ ಕೃಷ್ಣಪ್ಪ ಕಲ್ಲದೇವರ ಹಾಗೂ ಪಿಎಸ್ಐ ಶ್ರೀಶೈಲ್ ಅಂಬಾಟಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಚಿತಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.