ಪ್ರಮುಖ ಸುದ್ದಿ

ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ ಮುಖಂಡ ಇಬ್ರಾಹಿಂ ಶಿರವಾಳ

ಮುಸ್ಲಿಂ ಮುಖಂಡ  ಇಬ್ರಾಹಿಂ ಶಿರವಾಳ ಕಾಂಗ್ರೆಸ್ ಸೇರ್ಪಡೆ

ಯಾದಗಿರಿಃ  ಪಕ್ಷದ ರಾಷ್ಟ್ರಾಧ್ಯಕ್ಷ ರಾಹುಲ್ ಗಾಂಧಿಯವರ ಜನಾಶೀರ್ವಾದ ಕಾರ್ಯಕ್ರಮದ ಅಂಗವಾಗಿ ಸೋಮವಾರ ಜಿಲ್ಲೆಯ ಶಹಾಪುರ ನಗರದಲ್ಲಿ ಆಯೋಜಿಸಿದ್ದ ವೇದಿಕೆಯಲ್ಲಿ ಶಹಾಪುರ ಮತಕ್ಷೇತ್ರದ ಪ್ರಭಾವಿ ಮುಸ್ಲಿಂ ಮುಖಂಡ ಇಬ್ರಾಹಿಂ ಶಿರವಾಳ ಜೆಡಿಎಸ್ ತೊರೆದು ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆಗೊಂಡರು.

ಕೆಪಿಸಿಸಿ ಅದ್ಯಕ್ಷ ಡಾ.ಜಿ.ಪರಮೇಶ್ವರ ಅವರು ಪಕ್ಷದ ಶಾಲು ಹೊದಿಸಿ ಬರಮಾಡಿಕೊಂಡರು. ಕಾರ್ಯಕ್ರಮದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಚಿವ ಶರಣಬಸ್ಸಪ್ಪಗೌಡ ದರ್ಶನಾಪುರ, ಇಬ್ರಾಹಿಂಸಾಬ ಶಿರವಾಳ ಅವರು ಪಕ್ಷಕ್ಕೆ ಸೇರ್ಪಡೆಗೊಂಡಿರುವದರಿಂದ ಕ್ಷೇತ್ರದಲ್ಲಿ ಆನೆ ಬಲ ಬಂದಂತಾಗಿದೆ. ಪಕ್ಷದ ತತ್ವ ಸಿದ್ದಾಂತಗಳನ್ನು ಒಪ್ಪಿ ಅವರು ತಮ್ಮ ಅಪಾರ ಬೆಂಬಲಿಗರೊಂದಿಗೆ ಸೇರ್ಪಡೆಗೊಂಡಿದ್ದಾರೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಮುಖಂಡರಾದ ಸುರೇಂದ್ರ ಪಾಟೀಲ್ ಮಡ್ನಾಳ, ನೀಲಕಂಠ ಬಡಿಗೇರ್, ಬಸವರಾಜ ಹಿರೇಮಠ, ಅಮರೇಶಗೌಡ ದರ್ಶನಾಪುರ, ಯುವ ನಾಯಕ ಬಾಪುಗೌಡ ದರ್ಶನಾಪುರ ಸೇರಿದಂತೆ ಇತರರಿದ್ದರು.

 

Related Articles

Leave a Reply

Your email address will not be published. Required fields are marked *

Back to top button