ಪ್ರಮುಖ ಸುದ್ದಿ
ಇಂದು ಅಯೋಧ್ಯ ತೀರ್ಪುಃ ರಾಜ್ಯಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿದ ಸರ್ಕಾರ
ಇಂದು ಅಯೋಧ್ಯ ತೀರ್ಪುಃ ರಾಜ್ಯಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿದ ಸರ್ಕಾರ
ಬೆಂಗಳೂರಃ ಅಯೋಧ್ಯೆಯ ರಾಮ ಜನ್ಮ ಭೂಮಿ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಶನಿವಾರ ನ.9 ರಂದು ಬೆಳಗ್ಗೆ 10-30 ಗಂಟೆಗೆ ತೀರ್ಪು ನೀಡುತ್ತಿರುವ ಹಿನ್ನೆಲೆಯಲ್ಲಿ ರಾಜ್ಯಾದಾದ್ಯಂತ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಈ ಕುರಿತು ಶಿಕ್ಷಣ ಸಚಿವ ಸುರೇಶಕುಮಾರ ಟ್ವಿಟ್ ಮಾಡಿದ್ದು, ಶನಿವಾರ ನ.9 ರಂದು ರಾಜ್ಯದ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ನೀಡಿರುವುದಾಗಿ ತಿಳಿಸಿದ್ದಾರೆ.
ಅಯೋಧ್ಯ ತೀರ್ಪು ಪ್ರಕಟಗೊಳ್ಳುವ ಹಿನ್ನೆಲೆ ಅಯೋಧ್ಯ ಸೇರಿದಂತೆ ಎಲ್ಲೆಡೆ ಬಿಗಿ ಬಂದೋಬಸ್ತ್ ಮಾಡಲಾಗಿದೆ. ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ರಂಜನ್ ಗೊಗಯಿ ನೇತೃತ್ವದ ಸಾಂವಿಧಾನಿಕ ಪೀಠ ಬೆಳಗ್ಗೆ 10 ಗಂಟೆಗೆ ಅಯೋಧ್ಯ ವಿವಾದ ತೀರ್ಪು ಪ್ರಕಟಿಸಲಿದ್ದಾರೆ.