Homeಜನಮನಪ್ರಮುಖ ಸುದ್ದಿ

ಮಹಿಳೆಯ ಅಪಹರಣ ಪ್ರಕರಣ – ಹೆಚ್​ಡಿ ರೇವಣ್ಣ, ಭವಾನಿ ರೇವಣ್ಣ ಸೇರಿ 9 ಆರೋಪಿಗಳಿಗೆ ಸಮನ್ಸ್​ ಜಾರಿ

ಬೆಂಗಳೂರು : ಮೈಸೂರಿನ ಕೆಆರ್​ ನಗರ ಮಹಿಳೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್​ಡಿ ರೇವಣ್ಣ, ಭವಾನಿ ರೇವಣ್ಣ ಸೇರಿ 9 ಆರೋಪಿಗಳಿಗೆ ಸಮನ್ಸ್​ ಜಾರಿ ಮಾಡಲಾಗಿದೆ. ಆಗಸ್ಟ್‌ 28 ರಂದು ಖುದ್ದು ಹಾಜರಾಗುವಂತೆ 42ನೇ ಎಸಿಎಂಎಂ ಕೋರ್ಟ್​ನಿಂದ ಸಮನ್ಸ್​ ಜಾರಿ ಮಾಡಲಾಗಿದೆ.

ಕಿಡ್ನ್ಯಾಪ್ ಕೇಸ್​​ನಲ್ಲಿ ಭವಾನಿ ರೇವಣ್ಣರ ಕಾರು ಚಾಲಕ ಅಜಿತ್​ನನ್ನು ಎಸ್​ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. ಆತನ ವಿರುದ್ಧ ಸಂತ್ರಸ್ತೆ ವಿಡಿಯೋ ರೆಕಾರ್ಡ್ ಮಾಡಿ ವೈರಲ್ ಮಾಡಿರುವ ಆರೋಪವಿದೆ. ಭವಾನಿ ಸೂಚನೆ ಮೇರೆಗೆ ಮನೆಯಿಂದ ಕಾರಿನಲ್ಲಿ ಸಂತ್ರಸ್ತೆಯನ್ನು ಕರೆದೊಯ್ದ ಆರೋಪ ಕೂಡ ಇದೆ.

ಮನುಗೌಡ, ಸತೀಶ್ ಬಾಬು, ಕೆ.ಎ.ರಾಜಗೋಪಾಲ್, ಹೆಚ್.ಎನ್.ಮಧು, ಹೆಚ್.ಕೆ.ಸುಜಯ್, ಎಸ್.ಟಿ.ಕೀರ್ತಿ ಮತ್ತು ಅಜಿತ್ ಕುಮಾರ್​​ಗೆ ಐಪಿಸಿ ಸೆಕ್ಷನ್​ 364 A ಕೈಬಿಟ್ಟು ಉಳಿದ ಆರೋಪಗಳಿಗೆ ಸಂಬಂಧಿಸಿದಂತೆ ಸಮನ್ಸ್ ನೀಡಲಾಗಿದೆ.

Related Articles

Leave a Reply

Your email address will not be published. Required fields are marked *

Back to top button