ಪ್ರಮುಖ ಸುದ್ದಿ
ಯಡಿಯೂರಪ್ಪ ದುರ್ಬಲ ಸಿಎಂ – ಸಿದ್ರಾಮಯ್ಯ
ಉಪ ಚುನಾವಣೆ ಬಳಿಕ ಸರ್ಕಾರ ಬೀಳಲಿದೆ- ಸಿದ್ರಾಮಯ್ಯ
ಯಾದಗಿರಿಃ ಮುಖ್ಯಮಂತ್ರಿ ಯಡಿಯೂರಪ್ಪ ರಾಜ್ಯದ ದುರ್ಬಲ ಮುಖ್ಯಮಂತ್ರಿಯಾಗಿದ್ದು, ಕೇಂದ್ರದಲ್ಲಿ ತಮ್ಮದೇ ಸರ್ಕಾರವಿದ್ದರೂ ನೆರೆ ಪರಿಹಾರ ತರುವಲ್ಲಿ ವಿಫಲರಾಗಿದ್ದಾರೆ ಎಂದು ಮಾಜಿ ಸಿಎಂ ಸಿದ್ರಾಮಯ್ಯ ಹೇಳಿದರು.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇಡಿ ಕರ್ನಾಟಕದಲ್ಲಿ ಅರ್ಧದಸ್ಟು ನಾಡು ನೆರೆ ಹಾವಳಿಗೆ ತುತ್ತಾಗಿದ್ದು, ಕೇಂದ್ರ ಸರ್ಕಾರ ಇದುವರೆಗು ಒಂದೇ ಒಂದು ರೂಪಾಯಿ ಕಾಸು ಬಿಡುಗಡೆ ಮಾಡಿಲ್ಲ ಎಂದು ಆರೋಪಿಸಿದರು.
ಕೂಡಲೇ ಸರ್ವ ಪಕ್ಷದ ನಿಯೋಗ ತೆಗೆದುಕೊಂಡು ದೆಹಲಿಗೆ ಹೋಗಿ ಪ್ರಧಾನಿಯವರ ಮುಂದೆ ರಾಜ್ಯದ ನೆರೆ ಸ್ಥಿತಿ ಕುರಿತು ಮನವರಿಕೆ ಮಾಡಬೇಕು ಎಂದು ಆಗ್ರಹಿಸಿದರು.