ಬೂದಿಹಾಳ-ಪೀರಾಪುರ ಏತ ನೀರಾವರಿಗೆ ಆಡಳಿತಾತ್ಮಕ ಅನುಮೋದನೆಃ ಶಿರವಾಳ ಹರ್ಷ
ಬೂದಿಹಾಳ-ಪೀರಾಪುರ ಏತ ನೀರಾವರಿಗೆ ಆಡಳಿತಾತ್ಮಕ ಅನುಮೋದನೆಃ ಶಿರವಾಳ ಹರ್ಷ
yadgiri, ಶಹಾಪುರಃ ಶಹಾಪುರ ಮತ ಕ್ಷೇತ್ರದ ಹಲವು ಗ್ರಾಮಗಳು ಸೇರಿದಂತೆ ಬೂದಿಹಾಳ್-ಪೀರಾಪುರ ಏತ ನೀರಾವರಿ ಯೋಜನೆಗೆ ರಾಜ್ಯ ಸರ್ಕಾರ ಆಡಳಿತಾತ್ಮಕ ಅನುಮೋದನೆ ನೀಡಿರುವದು ಸಂತಸ ತಂದಿದ್ದು, ಈ ಭಾಗದ ರೈತಾಪಿ ಜನರ ಬಹುದಿನ ಕನಸು ಈಡೇರಿದಂತಾಗಿದೆ ಎಂದು ಮಾಜಿ ಶಾಸಕ ಗುರು ಪಾಟೀಲ್ ಶಿರವಾಳ ತಿಳಿಸಿದರು.
ಪತ್ರಿಕೆಯೊಂದಿಗೆ ಮಾತನಾಡಿದ ಅವರು, ಶಾಸಕನಾಗಿದ್ದಾಗ ಬೂದಿಹಾಳ್-ಪೀರಾಪುರ ಏತ ನೀರಾವರಿ ಯೋಜನೆ ಅನುಷ್ಠಾನಕ್ಕಾಗಿ ಯಾದಗಿರಿ ಜಿಲ್ಲಾಧಿಕಾರಿ ಕಚೇರಿ ಎದುರು ಉಪವಾಸ ಸತ್ಯಾಗ್ರಹ ಆರಂಭಿಸಿದ್ದೆ, ಅಲ್ಲದೆ ಆಲಮಟ್ಟಿಯಲ್ಲಿ ಈ ಭಾಗದ ರೈತರು ಸಹ ಪ್ರತಿಭಟನೆ ಧರಣ ಹಮ್ಮಿಕೊಳ್ಳುವ ಮೂಲಕ ಹೋರಾಟ ರೂಪಿಸಿದ್ದರು, ರೈತರು ಸೇರಿದಂತೆ ಎಲ್ಲಾ ಜನಪ್ರತಿನಿಧಿಗಳು ಈ ಏತ ನೀರಾವರಿ ಜಾರಿಗೆ ಪ್ರಯತ್ನಿಸಿದ ಎಲ್ಲರೂ ಅಭಿನಂದನಾರ್ಹರು.
ಅಲ್ಲದೆ ಮುಖ್ಯವಾಗಿ ಜಲಸಂಪನ್ಮೂಲ ಸಚಿವರಾದ ರಮೇಶ ಜಾರಕಿಹೊಳೆ ಅವರು ನೀರಾವರಿ ಯೋಜನೆ ಕುರಿತು ಸಮಗ್ರ ಮಾಹಿತಿ ಪಡೆಯಲು ಆಗಮಿಸಿದ್ದಾಗ, ಬೂದಿಹಾಳ-ಪೀರಾಪುರ ಏತ ನೀರಾವರಿ ಬಗ್ಗೆ ಸಮರ್ಪಕ ಮಾಹಿತಿ ನೀಡಿ ರೈತರೊಂದಿಗೆ ಮನವಿ ಸಲ್ಲಿಸಿದ್ದೆ, ಈ ಕುರಿತು ಸಿಎಂ ಜೊತೆ ಚರ್ಚಿಸಿ ಸೂಕ್ತ ಕ್ರಮಕೈಗೊಳ್ಳುವದಾಗಿ ಭರವಸೆ ನೀಡಿದ್ದರು, ಇಂದು ರೈತರ ಹೋರಾಟ, ಜನಪ್ರತಿನಿಧಿಗಳ ಪ್ರಯತ್ನ ಎಲ್ಲದರ ಫಲವಾಗಿ ಏತ ನೀರಾವರಿ ಯೋಜನೆಗೆ ಪ್ರಸಕ್ತ ವರ್ಷದಲ್ಲಿ 244 ಕೋಟಿ ರೂ. ಅನುದಾನ ಮೀಸಲಿಟ್ಟಿರುವದು ಖುಷಿ ತಂದಿದೆ.
ಆದಷ್ಟು ಬೇಗ ಕಾಮಗಾರಿ ಕೈಗೆತ್ತಿಕೊಂಡು ರೈತರ ಜಮೀನಿಗಳಿಗೆ ಸಮರ್ಪಕ ಸೌಲಭ್ಯ ಕಲ್ಪಿಸುವ ಮೂಲಕ ರೈತರ ಹಿತ ಕಾಪಾಡಬೇಕೆಂದು ಅವರು ಮನವಿ ಮಾಡಿದರು. ಮತ ಕ್ಷೇತ್ರದ ಸರ್ವ ರೈತರ ಪ್ರಯತ್ನದ ಫಲವಾಗಿ ಇಂದು ಏತ ನೀರಾವರಿ ಅನುಷ್ಠಾನಕ್ಕೆ ಸರ್ಕಾರ ಒಪ್ಪಿಗೆ ನೀಡಿರುವದು ಸಂತ ತಂದಿದೆ. ಜಲ ಸಂಪನ್ಮೂಲ ಸಚಿವ ಜಾರಕಿಹೊಳಿ ಸೇರಿದಂತೆ ಸಿಎಂ ಯಡಿಯೂರಪ್ಪ ಹಾಗೂ ಸಚಿವ ಸಂಪುಟದ ಎಲ್ಲಾ ಸಚಿವರಿಗೂ ಅಭಿನಂದನೆಗಳನ್ನು ಅರ್ಪಿಸಿದರು.