ಪ್ರಮುಖ ಸುದ್ದಿ

ದೋಸ್ತಿಗೆ ಠಕ್ಕರ್ : ನಗರಸಭೆ, ಪುರಸಭೆ, ಪಟ್ಟಣ ಪಂಚಾಯತಿ ನಾಮನಿರ್ದೇಶನವೂ ರದ್ದು

ಬೆಂಗಳೂರು: ದೋಸ್ತಿ ಸರ್ಕಾರ ನೇಮಿಸಿದ್ದ ನಿಗಮ ಮಂಡಳಿ, ಅಕಾಡೆಮಿ ಅಧ್ಯಕ್ಷರುಗಳನ್ನು ವಜಾಗೊಳಿಸಿದ್ದ ಯಡಿಯೂರಪ್ಪ ಸರ್ಕಾರ ಇಂದು ರಾಜ್ಯದ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿಗಳಿಗೆ ನೇಮಿಸಲಾಗಿದ್ದ ನಾಮನಿರ್ದೇಶಿತ ಸದಸ್ಯರ ನೇಮಕಾತಿಯನ್ನು ರದ್ದುಗೊಳಿಸಿದ್ದಾರೆ. ಆ ಮೂಲಕ ದೋಸ್ತಿ ಸರ್ಕಾರಕ್ಕೆ ಠಕ್ಕರ್ ಕೊಟ್ಟಿದ್ದಾರೆ.

ಅಷ್ಟೇ ಅಲ್ಲದೆ, ಐಎಎಸ್, ಐಪಿಎಸ್ ಅಧಿಕಾರಿಗಳನ್ನೂ ವರ್ಗಾವಣೆ ಮಾಡುವ ಮೂಲಕ ದೋಸ್ತಿ ಸರ್ಕಾರದ ಅವಧಿಯಲ್ಲಿದ್ದ ಅಧಿಕಾರಿಗಳನ್ನು ಬದಲಿಸಿದ್ದಾರೆ. ತಮ್ಮದೇ ಆದ ಹಿಡಿತ ಸಾಧಿಸುವ ನಿಟ್ಟಿನಲ್ಲಿ ಯಡಿಯೂರಪ್ಪ ಪ್ರತಿ ಹೆಜ್ಜೆಯನ್ನು ಅಳೆದು ತೂಗಿ ಇಡುತ್ತಿದ್ದಾರೆ ಎನ್ನಲಾಗಿದೆ.

Related Articles

Leave a Reply

Your email address will not be published. Required fields are marked *

Back to top button