ಪ್ರಮುಖ ಸುದ್ದಿ
ಹಸುಗಳಿಗೆ ಡಿಕ್ಕಿ ತಪ್ಪಿಸಲು ಚಾಲಕ ಯತ್ನ : ಸಾರಿಗೆ ಬಸ್ ಮರಕ್ಕೆ ಡಿಕ್ಕಿ
ಮೈಸೂರು : ಹಸುಗಳಿಗೆ ಡಿಕ್ಕಿ ತಪ್ಪಿಸಲು ಯತ್ನಿಸಿದ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಸಾರಿಗೆ ಬಸ್ ಮರಕ್ಕೆ ಡಿಕ್ಕಿಯಾದ ಘಟನೆ ಹೆಚ್.ಡಿ.ಕೋಟೆ ತಾಲೂಕಿನ ಕರಿಗಳ ಗ್ರಾಮದ ಸಮೀಪ ನಡೆದಿದೆ. ನಿಯಂತ್ರಣ ತಪ್ಪಿದ ಬಸ್ ರಸ್ತೆ ಬದಿಯಲ್ಲಿದ್ದ ಮರಗಳಿಗೆ ಡಿಕ್ಕಿಯಾಗಿದ್ದು ಸದ್ಯ ಭಾರಿ ಅನಾಹುತ ತಪ್ಪಿದೆ. ಮೈಸೂರಿನಿಂದ ಸರಗೂರಿಗೆ ತೆರಳುತ್ತಿದ್ದ ಸಾರಿಗೆ ಬಸ್ ನಲ್ಲಿ 40 ಕ್ಕೂ ಹೆಚ್ಚು ಪ್ರಯಾಣಿಕರಿದ್ದರು. ಅದೃಷ್ಟವಶಾತ್ ಯಾವುದೇ ಸಾವು ನೋವು ಸಂಭವಿಸಿಲ್ಲ ಎಂದು ತಿಳಿದು ಬಂದಿದೆ. ಹೆಚ್.ಡಿ ಕೋಟೆ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.