ಪ್ರಮುಖ ಸುದ್ದಿ
ಹೊತ್ತಿ ಉರಿದ ಬಸ್ : ಪ್ರಯಾಣಿಕರು ಪಾರಾಗಿದ್ದೇ ಮಿರಾಕಲ್!
ಸಮಯ ಪ್ರಜ್ಞೆ ಮೆರೆದ ಚಾಲಕನಿಗೊಂದು ಸಲಾಂ
ಹಾಸನ: ನಗರದ ಸಮೀಪವಿರುವ ಕೆಂಚಟನಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಚಲಿಸುತ್ತಿದ್ದ ಖಾಸಗಿ ಬಸ್ ನಲ್ಲಿ ತಾಂತ್ರಿಕ ದೋಷದಿಂದಾಗಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣಕ್ಕೆ ಎಚ್ಚೆತ್ತುಕೊಂಡ ಬಸ್ ಚಾಲಕ ಬಸ್ ನ್ನು ರಸ್ತೆ ಬದಿಗೆ ನಿಲ್ಲಿಸಿ ಪ್ರಯಾಣಿಕರನ್ನು ಕೆಳಗಿಳಿಯುವಂತರ ಸೂಚಿಸಿದ್ದಾನೆ. ಪ್ರಯಾಣಿಕರು ಕೆಳಗೆ ಇಳಿಯುತ್ತಿದ್ದಂತೆಯೇ ಬಸ್ ಧಗಧಗನೆ ಉರಿದು ಸಂಪೂರ್ಣ ಸುಟ್ಟು ಕರಕಲಾಗಿದೆ.
ಸುಮಾರು 30 ಪ್ರಯಾಣಿಕರನ್ನು ಹೊತ್ತು ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ತಾಂತ್ರಿಕ ದೋಷದಿಂದ ಸುಟ್ಟಿದೆ. ಸದ್ಯ ಚಾಲಕನ ಸಮಯ ಪ್ರಜ್ಞೆಯಿಂದಾಗಿ ಭಾರೀ ಅನಾಹುತವೊಂದು ತಪ್ಪಿದೆ. ಹೀಗಾಗಿ, ಪ್ರಯಾಣಿಕರು ಜೀವ ಉಳಿಸಿದ ಚಾಲಕನಿಗೆ ಸಲಾಂ ಹೇಳಿದ್ದಾರೆ. ಬಸ್ ಸುಟ್ಟು ಕರಕಲಾಗಿರುವ ಬಗ್ಗೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಸ್ ಅಗ್ನಿ ಅವಘಡಕ್ಕೆ ತುತ್ತಾಗಲು ನಿಖರವಾದ ಕಾರಣವೇನೆಂಬುದು ಪೊಲೀಸರ ತನಿಖೆಯಿಂದ ಪತ್ತೆಯಾಗಬೇಕಿದೆ.