ಪ್ರಮುಖ ಸುದ್ದಿ
ಮೂವರು ಉಗ್ರರನ್ನು ಹೊಡೆದುರುಳಿಸಿದ ಭಾರತ ಸೇನೆ
ವಿವಿ ಡೆಸ್ಕ್ಃ ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದ ತ್ರಾಲ್ ಪ್ರದೇಶದಲ್ಲಿ ಉಗ್ರರು ಅಡಗಿರುವದನ್ನು ಅರಿತ ಭಾರತೀಯ ಸೇನೆ ಕಾರ್ಯಾಚರಣೆ ನಡೆಸುವ ಮೂಲಕ ಮೂವರು ಉಗ್ರರನ್ನು ಹೊಡೆದುರುಳಿಸಿದ ಘಟನೆ ನಡೆದಿದೆ.
ಈ ಪ್ರದೇಶದಲ್ಲಿ ಉಗ್ರರು ಅವಿತಿರುವ ಮಾಹಿತಿ ಹಿನ್ನಲೆಯಲ್ಲಿ ಸೇನೆ ಕಾರ್ಯಾಚರಣೆ ಕೈಗೊಂಡಿದ್ದು, ಶರಣಾಗುವಂತೆ ಸೂಚನೆ ನೀಡಿದರೂ, ಉಗ್ರರು ಗುಂಡಿನ ದಾಳಿ ನಡೆಸಿ ಪರಾರಿಯಾಗಲು ಯತ್ನಿಸಿದರು. ಆಗ ಪ್ರತಿ ದಾಳಿ ನಡೆಸಿದ ಭಾರತದ ಯೋಧರು ಮೂವರು ಉಗ್ರರನ್ನು ಹೊಡೆದುರುಳಿಸಿದ್ದಾರೆ.
ಆದಾಗ್ಯೂ ಇನ್ನೂ ಹಲವು ಭಯೋತ್ಪಾದಕರು ಈ ಪ್ರದೇಶದಲ್ಲಿ ಅವಿತಿರುವ ಸಾಧ್ಯತೆ ಇದ್ದು, ಪೊಲೀಸರು ಹಾಗೂ ಯೋಧರು ಶೋಧ ಕಾರ್ಯ ಮುಂದುವರೆಸಿದ್ದಾರೆ ಎನ್ನಲಾಗಿದೆ.