ಪ್ರಮುಖ ಸುದ್ದಿ
ಗೃಹ ಪ್ರವೇಶಿಸಿದ ಸಿಬಿಐ : ಮಾಜಿ ಕೇಂದ್ರ ಸಚಿವ ಪಿ.ಚಿದಂಬರಂ ಬಂಧನ?
ದೆಹಲಿ: ಐಎನ್ಎಕ್ಸ್ ಮೀಡಿಯಾ ಹಗರಣದ ಆರೋಪಿ, ಮಾಜಿ ಕೇಂದ್ರ ಸಚಿವ ಪಿ.ಚಿದಂಬರಂ ಅವರು ಸಲ್ಲಿಸಿರುವ ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆಯನ್ನು ಸುಪ್ರೀಂಕೋರ್ಟ್ ಇಂದು ಶುಕ್ರವಾರಕ್ಕೆ ಮುಂದೂಡಿದೆ. ಈ ನಡುವೆ ಇಂದು ಏಕಾಏಕಿ ದೆಹಲಿಯ ಕಾಂಗ್ರೆಸ್ ಕಚೇರಿಯಲ್ಲಿ ಪ್ರತ್ಯಕ್ಷವಾದ ಚಿದಂಬರಂ ಸುದ್ದಿಗೋಷ್ಠಿ ನಡೆಸಿ ನನ್ನದೇನು ತಪ್ಪಿಲ್ಲ. ಯಾವುದೇ ಹಗರಣದಲ್ಲಿ ನಾನು ಭಾಗಿ ಆಗಿಲ್ಲ. ನನ್ನ ವಿರುದ್ಧ ಷಡ್ಯಂತ್ರ ನಡೆದಿದೆ ಎಂದು ಅವರು ಹೇಳಿದ್ದು ಸುದ್ದಿಗೋಷ್ಠಿ ನಡೆಸಿ ಅಲ್ಲಿಂದ ತೆರಳಿದ್ದಾರೆ. ಹೀಗಾಗಿ, ಕೇಂದ್ರ ಮಾಜಿ ಸಚಿವ ಚಿದಂಬರಂ ಬಂಧನ ಸಾಧ್ಯತೆ ಹೆಚ್ಚಾಗಿದೆ.
ನಿನ್ನೆಯಿಂದ ಮೂರು ಸಲ ಚಿದಂಬರಂ ಬಂಧನಕ್ಕಾಗಿ ಅವರ ಮನೆಗೆ ತೆರಳಿದ್ದ ಸಿಬಿಐ ಮತ್ತು ಇಡಿ ಅಧಿಕಾರಿಗಳು ಇದೀಗ ರಾತ್ರಿ 9ಗಂಟೆ ಸುಮಾರಿಗೆ ಮತ್ತೆ ಚಿದಂಬರಂ ಮನೆ ಕಂಪೌಂಡ್ ಹಾರಿ ಒಳ ಹೋಗಿದ್ದಾರೆ ಎಂದು ತಿಳಿದು ಬಂದಿದ್ದು ಯಾವುದೇ ಕ್ಷಣದಲ್ಲಿ ಮಾಜಿ ಕೇಂದ್ರ ಸಚಿವ ಪಿ.ಚಿದಂಬರಂ ಬಂಧನ ಸಾಧ್ಯತೆ ಇದೆ.