ಪ್ರಮುಖ ಸುದ್ದಿ
ರಾಜಾ ವೆಂಕಟಪ್ಪ ನಾಯಕರ ಮಾತು ಕಮ್ಮಿ ಕೆಲಸ ಜಾಸ್ತಿ -ಸುರಪುರ ಶಾಸಕರ ಗುಣಗಾನ ಮಾಡಿದ ಸಿಎಂ
ಸುರಪುರ: ಸುರಪುರ ಮತಕ್ಷೇತ್ರದ ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯಕ ಅವರ ಮಾತು ಕಡಿಮೆ, ಕೆಲಸ ಜಾಸ್ತಿ. ಅವರು ಕೇಳಿದ ಎಲ್ಲಾ ಕೆಲಸಗಳನ್ನೂ ಮಾಡಿ ಕೊಟ್ಟಿದ್ದೇವೆ. ಇನ್ನೂ ಏನೇನು ಕೇಳುತ್ತಾರೋ ಅವೆಲ್ಲವನ್ನೂ ಮಾಡಿಕೊಡ್ತೀವಿ. ಮುಂದೆಯೂ ನಾವೇ ಅಧಿಕಾರಕ್ಕೆ ಬರಲಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು.
ಸುರಪುರ ತಾಲೂಕಿನ ಹುಣಸಗಿ ಪಟ್ಟಣದಲ್ಲಿ ಸಿಎಂ ಸಿದ್ಧರಾಮಯ್ಯ ಸರ್ಕಾರದ ಸಾಧನಾ ಸಮಾವೇಶವನ್ನು ಉದ್ಘಾಟಿಸಿದರು. ನೀರಾವರಿ ಸಚಿವ ಎಂ.ಬಿ.ಪಾಟೀಲ್, ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ, ಶಾಸಕ ರಾಜಾ ವೆಂಕಟಪ್ಪ ನಾಯಕ ಉಪಸ್ಥಿತರಿದ್ದರು.