ಪ್ರಮುಖ ಸುದ್ದಿ

ಯಾದಗಿರಿ, ರಾಯಚೂರ ಹಿಂದುಳಿದ ಜಿಲ್ಲೆಗಳೆಂದು‌ ಕೇಂದ್ರ ಗುರುತಿಸಿದೆ-ಸದಾನಂದಗೌಡ

ಹಿಂದುಳಿದ ಜಿಲ್ಲೆಗಳ‌ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಬದ್ಧ

ಯಾದಗಿರಿ: ಕೇಂದ್ರ ಸರ್ಕಾರ ರಾಜ್ಯದಲ್ಲಿ ಯಾದಗಿರಿ ಮತ್ತು ರಾಯಚೂರನ್ನು ಹಿಂದುಳಿದ ಜಿಲ್ಲೆಗಳೆಂದು ಗುರುತಿಸಿದೆ. ಈ ಜಿಲ್ಲೆಗಳ ಸಮರ್ಪಕ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಬದ್ಧ ಎಂದು ಕೇಂದ್ರ ಸಚಿವ ಡಿ.ವಿ ಸದಾನಂದ ಗೌಡ ತಿಳಿಸಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2020 ರೊಳಗೆ ಯಾದಗಿರಿ ಜಿಲ್ಲೆಗೆ ಬೇಕಾದ ಸವಲತ್ತುಗಳನ್ನು ಒದಗಿಸುವಂತೆ ರಾಜ್ಯಸರ್ಕಾರಕ್ಕೆ ಕೇಂದ್ರ ಸೂಚಿಸಿದೆ.

ಎರಡು ಜಿಲ್ಲೆಗಳಲ್ಲಿ ಆರೋಗ್ಯ, ಶಿಕ್ಷಣ, ಮೂಲಭೂತ ಸೌಕರ್ಯಗಳನ್ನು ಒದಗಿಸಲು ಮೊದಲ‌ ಆದ್ಯತೆ‌ ನೀಡಲಾಗುವುದು ಎಂದು ತಿಳಿಸಿದರು.

ಹಂತ ಹಂತವಾಗಿ ಜಿಲ್ಲೆಗಳ ಅಭಿವೃದ್ಧಿಗೆ ಸೂಕ್ತ ಕ್ರಮಕೈಗೊಳ್ಳಲಾಗಿದೆ. ಆಯಕಟ್ಟಿನ ಸ್ಥಳಕ್ಕೆ ಅಧಿಕಾರಿಗಳು‌ ಜವಬ್ದಾರಿವಹಿಸಿಕೊಂಡಿದ್ದು, ಕಾರ್ಯೋನ್ಮುಖವಾಗಿದ್ದಾರೆ.

ಆಯುಷ್ಮಾನ್ ಭಾರತ ಯೋಜನೆಯನ್ನು ಸಮ‌ರ್ಪಕವಾಗಿ‌ ಅನುಷ್ಠಾನಗೊಳಿಸುವ ಮೂಲಕ ಜನರಿಗೆ ಅನುಕೂಲ ಕಲ್ಪಿಸುವ ಉದ್ದೇಶ ಹೊಂದಲಾಗಿದೆ.

ಆದರೆ ಜಿಲ್ಲೆಯ ಆರೋಗ್ಯ ಇಲಾಖೆಯಲ್ಲಿ ಸಿಬ್ಬಂದಿ ಕೊರತೆ ಇರುವ ಕುರಿತು ಗಮನಕ್ಕೆ ಬಂದಿದೆ. ಈ‌ ಕುರಿತು ನೀಗಿಸಲು ಪ್ರಾಮಾಣಿಕ‌ ಯತ್ನ‌‌ ಮಾಡುತ್ತೇನೆ.

5-6 ತಿಂಗಳಲ್ಲಿ ಆನೆಕಾಲು ರೋಗ ಅಥವಾ ಇನ್ನಿತರೆ ಆರೋಗ್ಯ ಸಮಸ್ಯೆಗಳ ನಿವಾರಣೆಗೆ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಆದೇಶಿಸಲಾಗಿದೆ ಎಂದರು.

ಜಿಲ್ಲಾಡಳಿತದಿಂದ ವಿಶೇಷವಾಗಿ ಪ್ರತಿ ತಿಂಗಳು ಜಿಲ್ಲೆಯಲ್ಲಿ ಅಭಿವೃದ್ಧಿಯ ಕುರಿತು ಸಮೀಕ್ಷೆ ನಡೆಸಲಾಗುತ್ತದೆ.

ಈ ಹಿಂದೆ‌ ಕರ್ತವ್ಯ‌ ಸಲ್ಲಿಸಿದ್ದ ಜಿಲ್ಲಾಧಿಕಾರಿ ಮಂಜುನಾಥ ಅವರು ಒಳ್ಳೆಯ ಕೆಲಸ ಮಾಡಿದ್ದಾರೆಂದು ತಿಳಿದಿದೆ ಬಂದಿದೆ‌‌ ಎಂದು‌ ತಿಳಿಸಿದರು.

ಇನ್ನು ಇದೇ ವೇಳೆ ಅವರು, ಬೌದ್ಧ ಧರ್ಮಗುರು ದಲಾಯಿ ಲಾಮ ಅವರ ಹತ್ಯೆಗೆ ಉಗ್ರರು ಸಂಚು ರೂಪಿಸಿದ್ದ ಸುದ್ದಿ ಕುರಿತು ಪ್ರತಿಕ್ರಿಯೆ ನೀಡಲು ನಿರಾಕರಿಸಿದರು.

Related Articles

Leave a Reply

Your email address will not be published. Required fields are marked *

Back to top button