ಪ್ರಮುಖ ಸುದ್ದಿ

ವಾರ್ಡವಾರು ಜಾಗೃತಿಗೆ ನಗರಸಭೆ ಸದಸ್ಯರ ಸಹಕಾರ ಅತ್ಯಗತ್ಯ-DC ಕೂರ್ಮಾರಾವ್

ಕೋವಿಡ್-19 ಸೋಂಕು ತಡೆಗೆ ಸದಸ್ಯರ ಸಹಭಾಗಿತ್ವ ಅಗತ್ಯ-ಕೂರ್ಮಾರಾವ್

ಶಹಾಪುರಃ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಸರ್ಕಾರ ಸೂಚಿಸಿದ ಲಾಕ್ ಡೌನ್ ನೀತಿ ಸಡಿಲಿಕೆಯೊಂದಿಗೆ ಕಡ್ಡಾಯವಾಗಿ ನಿಯಮಗಳನ್ನು ಪಾಲನೆ ಮಾಡಬೇಕು. ಹೊರ ರಾಜ್ಯ, ದೇಶಗಳಿಂದ ಆಗಮಿಸುವ ಜನರ ಪತ್ತೆ ಹಚ್ಚುವಿಕೆಯಲ್ಲಿ ವಾರ್ಡ ಸದಸ್ಯರ ಪಾತ್ರ ಅವಶ್ಯಕವಾಗಿದ್ದು, ಅಧಿಕಾರಿಗಳೊಂದಿಗೆ ಸರ್ವ ಸದಸ್ಯರ ಸಹಭಾಗಿತ್ವ್ವ ಅಗತ್ಯವಿದೆ ಎಂದು ಜಿಲ್ಲಾಧಿಕಾರಿ ಎಂ.ಕೂರ್ಮಾರಾವ್ ತಿಳಿಸಿದರು.
ಇಲ್ಲಿನ ನಗರಸಭೆ ಸಭಾಂಗಣದಲ್ಲಿ ನಡೆದ ನಗರಸಭೆ ಸರ್ವ ಸದಸ್ಯರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.

ನಗರ ಪ್ರದೇಶದಲ್ಲಿ ಸಾಮಾಜಿಕ ಅಂತರ ಕಾಪಾಡುವದು ಸೇರಿದಂತೆ ಮಾಸ್ಕ್ ಬಳಕೆ ಕಡ್ಡಾಯಗೊಳಿಸಬೇಕಿದೆ. ನಗರದಲ್ಲಿ ಸಮರ್ಪಕವಾಗಿ ಯಾರೊಬ್ಬರು ನಿಯಮಗಳನ್ನು ಪಾಲಿಸುತ್ತಿಲ್ಲ. ಜನರು ಬೇಕಾಬಿಟ್ಟಿಯಾಗಿ ಓಡಾಡುತ್ತಿರುವದು ಕಂಡು ಬಂದಿದ್ದು, ಅಧಿಕಾರಿಗಳು ಸೂಕ್ತಕ್ರಮ ಕೈಗೊಂಡು ಲಾಕ್ ಡೌನ್ ನೀತಿ ಪಾಲನೆ ಮಾಡುವಲ್ಲಿ ಶ್ರಮಿಸಬೇಕು.

ನಗರಸಭೆ ಸದಸ್ಯರು ಅಧಿಕಾರಿ ಸಿಬ್ಬಂದಿಗಳಿಗೆ ಸಾಥ್ ನೀಡಬೇಕು. ಅಲ್ಲದೆ ಯಾರಾದರೂ ಹೊರ ರಾಜ್ಯ, ದೇಶಗಳಿಂದ ಆಗಮಿಸಿದಲ್ಲಿ ಅವರಿಗೆ 14 ದಿನಗಳ ಕಾಲ ಹೋಂ ಕ್ವಾರಂಟೈನ್ ನಲ್ಲಿರಲು ಮನವೊಲಿಸಬೇಕು. ಸದಸ್ಯರು ಈ ಕುರಿತು ಜನರಲ್ಲಿ ಜಾಗೃತಿಗೆ ಮುಂದಾಗಬೇಕು ಎಂದು ಕರೆ ನೀಡಿದರು.
ಲಾಕ್ ಡೌನ್ ನಿಯಮ ಪಾಲಿಸದಿದ್ದಲ್ಲಿ ಸೂಕ್ತ ಕಾನೂನು ಕ್ರಮಕೈಗೊಳ್ಳಲಾಗುತ್ತದೆ. ಜನ ಸಾಮಾನ್ಯರಿಗೆ ಕಾನೂನು ಅರಿವು ಮೂಡಿಸುವದು ಪ್ರತಿಯೊಬ್ಬರ ಕರ್ತವ್ಯವಾಗಿದೆ. ಸರ್ವ ಸದಸ್ಯರು ಪ್ರಯತ್ನಿಸಬೇಕು ಎಂದು ಮನವರಿಕೆ ಮಾಡಿದರು.
ಈ ಸಂದರ್ಭದಲ್ಲಿ ಸಹಾಯಕ ಆಯುಕ್ತರಾದ ಶಂಕರಗೌಡ ಸೋಮನಾಳ, ತಹಶೀಲ್ದಾರ ಜಗನ್ನಾಥರಡ್ಡಿ, ನಗರಸಭೆ ಪೌರಾಯುಕ್ತ ಬಸವರಾಜ ಶಿವಪೂಜೆ, ತಾಲೂಕಾ ಆರೋಗ್ಯ ಅಧಿಕಾರಿ ಡಾ.ರಮೇಶ ಗುತ್ತೇದಾರ ಸೇರಿದಂತೆ ನಗರಸಭೆ ಸರ್ವ ಸದಸ್ಯರು ನಗರಸಭೆ ಅಧಿಕಾರಿಗಳು , ಸಿಬ್ಬಂದಿ ಭಾಗವಹಿಸಿದ್ದರು.

Related Articles

Leave a Reply

Your email address will not be published. Required fields are marked *

Back to top button