
ದರ್ಶನಾಪುರ ಅವರಿಗೆ ಡಿಸಿಎಂ ಹುದ್ದೆ ನೀಡಿ- ಸಲಾದಪುರ
ಹಿರಿತನ, ಅಭಿವೃದ್ಧಿ ಕಾರ್ಯ ಗುರುತಿಸಿ ಜವಬ್ದಾರಿ ನೀಡಿ
ವಿನಯವಾಣಿ ಸಮಾಚಾರ
ಶಹಾಪುರ: ರಾಜಕಾರಣದಲ್ಲಿ ತಮ್ಮದೆಯಾದ ವಿಶಿಷ್ಟ ಛಾಪು ಮೂಡಿಸಿದ ಸಚಿವ ಶರಣಬಸಪ್ಪಗೌಡ ದರ್ಶನಾಪುರ ಅವರಿಗೆ ಪ್ರಸ್ತುತ ಬದಲಾದ ರಾಜಕೀಯ ಸನ್ನಿವೇಶದಲ್ಲಿ ಡಿಸಿಎಂ ಹುದ್ದೆ ಕಲ್ಪಿಸಬೇಕೆಂದು ಕರ್ನಾಟಕ ರಾಜ್ಯ ಮಧ್ಯಪಾನ ಸಂಯಮ ಮಂಡಳಿ ಅಧ್ಯಕ್ಷ ಶರಣಪ್ಪ ಸಲಾಪದಪುರ ಆಗ್ರಹಿಸಿದ್ದಾರೆ. ಕಾಂಗ್ರೆಸ್ ಪಕ್ಷದ ವರಿಷ್ಠರು, ನೂತನ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಲಿರುವ ಡಿ.ಕೆ.ಶಿವಕುಮಾರ ಅವರು ದರ್ಶನಾಪುರ ಅವರ ಹಿರಿತನ, ರಾಜಕೀಯ ಅರ್ಹತೆ ಪರಿಗಣಿಸಿ ಡಿಸಿಎಂ ಹುದ್ದೆ ಜವಬ್ದಾರಿ ನೀಡಬೇಕೆಂದು ಅವರು ಆಗ್ರಹಿಸಿದ್ದಾರೆ.
ಕಲ್ಬುರ್ಗಿ, ಯಾದಗಿರಿ ಹಾಗೂ ರಾಯಚೂರ ಜಿಲ್ಲೆಗೆ ಅವರ ಸೇವೆಯ ಅಗತ್ಯತೆಯನ್ನು ಪರಿಗಣಿಸಬೇಕು.
ಅಲ್ಲದೆ ಹಿಂದೆ ಮೂರು ಬಾರಿ ಸಚಿವರಾಗಿ ಉತ್ತಮ ಕಾರ್ಯಸಾಧನೆ ಮಾಡಿದ್ದು, ಯಾದಗಿರಿ ಜಿಲ್ಲಾ ಉಸ್ತುವಾರಿ ಮಂತ್ರಿಯಾಗಿ ಮೂರುವರ್ಷಗಳ ಕಾಲ ಯಾವುದೇ ಸಮಸ್ಯೆಗಳಿದ್ದಂತೆ ಸಿಎಂ ಸಿದ್ರಾಮಯ್ಯನವರೊಂದಿಗೆ ಸಾಕಷ್ಟು ಕೆಲಸ ಮಾಡಿದ್ದಾರೆ. ಜಿಲ್ಲೆಯಲ್ಲಿ ಯಾವುದೇ ಸಮಸ್ಯೆ ಬಂದರೂ ತಕ್ಷಣ ಸ್ಪಂಧಿಸುವ ಅದನ್ನು ಬಗೆಹರಿಸುವ ಮೂಲಕ ಮತ್ತು ಪಕ್ಷದ ಸಂಘಟನೆಗೆ ಒತ್ತು ನೀಡಿದ್ದಾರೆ. ಸರ್ವ ಸಮುದಾಯವನ್ನು ಒಗ್ಗೂಡಿಸಿಕೊಂಡು ಹೋಗುವ ಶಕ್ತಿ ಅವರಲ್ಲಿದೆ. ದರ್ಶನಾಪುರರ ಸೇವೆ ಗುರುತಿಸಿ ಹೊಸ ಸಂಪುಟ ರಚನೆ ಸಂದರ್ಭದಲ್ಲಿ ಅವರಿಗೆ ಡಿಸಿಎಂ ಸ್ಥಾನ ನೀಡುವ ಮೂಲಕ ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಸಹಕರಿಸಬೇಕೆಂದು ಅವರು ಪ್ರಕಟಣೆ ಮೂಲಕ ಒತ್ತಾಯಿಸಿದ್ದಾರೆ.




