ಪ್ರಮುಖ ಸುದ್ದಿ
ಶಿವಮೊಗ್ಗ ನರಸಿಂಹ ನಾಯಕ ನಿಧನಕ್ಕೆCM ತೀವ್ರ ಸಂತಾಪ
ಧುರೀಣ ನರಸಿಂಹ ನಾಯಕ ನಿಧನಕ್ಕೆ ಸಿಎಂ ಯಡಿಯೂರಪ್ಪ ತೀವ್ರ ಸಂತಾಪ
ಬೆಂಗಳೂರುಃ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಸಹಕಾರಿ ಧುರೀಣ ಕೆ.ನರಸಿಂಹ ನಾಯಕ್ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಕೆ. ನರಸಿಂಹ ನಾಯಕ್ ಅವರು ಮ್ಯಾಮ್ಕೋಸ್ನ ಉಪಾಧ್ಯಕ್ಷ ಹಾಗೂ ಪಟ್ಟಣ ಪಂಚಾಯತ್ ಸದಸ್ಯರಾಗಿ ಉತ್ತಮ ಕಾರ್ಯಗಳ ಮೂಲಕ ಜನನಾಯಕರಾಗಿ ಬೆಳೆದಿದ್ದರು ಎಂದು ಯಡಿಯೂರಪ್ಪ ಸ್ಮರಿಸಿದ್ದಾರೆ.
ಕೆ. ನರಸಿಂಹ ನಾಯಕ್ ಅವರ ನಿಧನದಿಂದ ಸಹಕಾರಿ ಕ್ಷೇತ್ರಕ್ಕೆ ಮತ್ತು ವೈಯಕ್ತಿಕವಾಗಿ ನನಗೆ ನಷ್ಟವುಂಟು ಮಾಡಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.
ಪ್ರಗತಿಪರ ಕೃಷಿಕರಾಗಿದ್ದ ಅವರು ಜನಾನುರಾಗಿ ಯಾಗಿದ್ದಾರೆ. ಅವರ ಇನ್ನಿಲ್ಲ ಎಂಬ ಸುದ್ದಿ ಕೇಳಿ ತೀವ್ರ ನೋವಾಗಿದೆ. ದೇವರು ಆತ್ಮಕ್ಕೆ ಶಾಂತಿ ನೀಡಲಿ ಎಂದು ಅವರು ಪ್ರಾರ್ಥಿಸಿದ್ದಾರೆ.