ಪ್ರಮುಖ ಸುದ್ದಿ
ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಬಂಧನ?
(ಸಾಂದರ್ಭಿಕ ಚಿತ್ರ)
ನವದೆಹಲಿ : ಮಧ್ಯಂತರ ರಕ್ಷಣೆ ಕೋರಿ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿ ಹೈಕೋರ್ಟ್ ಆದೇಶಿಸಿದೆ. ಪ್ರಕರಣ ಎಲ್ಲಾ ಅಂಶಗಳನ್ನು ಪರಿಶೀಲಿಸಿಯೇ ನಿನ್ನೆ ತೀರ್ಪು ನೀಡಲಾಗಿದೆ. ಹೀಗಾಗಿ, ಮರು ಪರಿಶೀಲಿಸಲು ಸಾಧ್ಯವಿಲ್ಲ ಎಂದು ಎಂದು ತಿಳಿಸಿದೆ. ಹೀಗಾಗಿ, ಇಡಿ ಸೂಚನೆಯಂತೆ ಇಂದೇ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ವಿಚಾರಣೆಗೆ ಹಾರಗಬೇಕಿದೆ. ವಿಚಾರಣೆ ನಡೆಸಿದ ಇಡಿ ಅಧಿಕಾರಿಗಳು ಡಿ.ಕೆ.ಶಿ ವಶಕ್ಕರ ಪಡೆದು ಬಂಧಿಸುವ ಸಾಧ್ಯತೆ ಇದೆ. ವಿಚಾರಣೆಗೆ ಹಾಜರಾಗದಿದ್ದಲ್ಲಿ ನಾಳೆಯೇ ಇಡಿ ಅಧಿಕಾರಿಗಳು ಡಿಕೆಶಿ ಬಂಧಿಸುವ ಸಾಧ್ಯತೆ ಇದೆ. ಹೀಗಾಗಿ, ಇಂದು ಸಂಜೆ ವೇಳೆಗೆ ಡಿಕೆಶಿ ಬಂಧನ ಬಹುತೇಕ ಖಚಿತ ಎಂದು ಹೇಳಲಾಗುತ್ತಿದೆ. ಡಿ.ಕೆ.ಶಿವಕುಮಾರ್ ಗೆ ಮೇಲ್ಮನವಿ ಸಲ್ಲಿಸುವ ಅವಕಾಶವಿದೆ ಆದರೂ ಸದ್ಯ ಬಂಧನದಿಂದ ಬಚಾವಾಗುವುದು ಕಷ್ಟಸಾಧ್ಯ ಎನ್ನಲಾಗುತ್ತಿದೆ.