ಪ್ರಮುಖ ಸುದ್ದಿ
ಯಾದಗಿರಿಃ ಕರ್ತವ್ಯ ಲೋಪ ಹಿನ್ನೆಲೆ ಪ್ರಭಾರ ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಎಂ.ಎಸ್.ಪಾಟೀಲ್ ಅಮಾನತು
ಅಮಾನತಿಗೆ ಶಾಸಕ ಡಾ.ಮಾಲಕರಡ್ಡಿ ಅವರೇ ಕಾರಣ..!
ಯಾದಗಿರಿಃ ಕರ್ತವ್ಯ ಲೋಪ ಹಿನ್ನೆಲೆಯಲ್ಲಿ ಜಿಲ್ಲಾ ಸರ್ಕಾರಿ ಆಸ್ಪತ್ರೆಯ ಪ್ರಭಾರ ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಎಂ.ಎಸ್.ಪಾಟೀಲ್ ಅವರನ್ನು ಅಮಾನತುಗೊಳಿಸಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತ ಮನೋಜ್ ಕುಮಾರ ಮೀನಾ ಆದೇಶ ಹೊರಡಿಸಿದ್ದಾರೆ.
ಅಮಾನತುಗೊಂಡ ಡಾ. ಎಂ.ಎಸ್.ಪಾಟೀಲ್ ವಿರುದ್ಧ ಶಾಸಕ ಡಾ.ಎ.ಬಿ.ಮಾಲಕರಡ್ಡಿ ಅವರು ದೂರು ನೀಡಿದ್ದರು ಎನ್ನಲಾಗಿದೆ. ಡಾ.ಎಂ.ಎಸ್.ಪಾಟೀಲ್ ವಿರುದ್ಧ ಅಧಿಕಾರ ದುರಪಯೋಗ, ಕರ್ತವ್ಯ ಲೋಪ ಎಸಗಿರುವ ಬಗ್ಗೆ ಸಂಬಂಧಿಸಿದ ಇಲಾಖೆಯ ಆಯುಕ್ತರಾದ ಮನೋಜಕುಮಾರ ಮೀನಾ ಅವರಿಗೆ ಮಾಲಕರಡ್ಡಿ ಅವರು ದೂರು ಸಲ್ಲಿಸಿದ್ದರು ಎನ್ನಲಾಗಿದೆ. ಕರ್ತವ್ಯಲೋಪ ಕುರಿತು ಸಾಕಷ್ಟು ಬಾರಿ ಡಾ.ಪಾಟೀಲರಿಗೆ ಎಚ್ಚರಿಕೆ ನೀಡಿದ್ದರು ಎಂದು ತಿಳಿದು ಬಂದಿದೆ.
ಈ ಹಿನ್ನೆಲೆಯಲ್ಲಿ ಡಾ.ಎಂ.ಎಸ್.ಪಾಟೀಲ್ ಅವರು ಅಮಾನತುಗೊಂಡಿದ್ದಾರೆ ಎಂದು ಆರೋಗ್ಯ ಇಲಾಖೆ ಮೂಲಗಳಿಂದ ತಿಳಿದು ಬಂದಿದೆ.