Homeಜನಮನಪ್ರಮುಖ ಸುದ್ದಿ

ಕೋಲಾರ: ವರದಕ್ಷಿಣೆ ಕಿರುಕುಳ ಆರೋಪ – ನವವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ

ಕೋಲಾರ: ಕೌಟುಂಬಿಕ ಕಲಹದಿಂದ ಸಹಕಾರ ನಗರದ ನಿವಾಸಿ ನವವಿವಾಹಿತೆ ಮಾನಸ (24) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಒಂದು ವರ್ಷದ ಹಿಂದೆ ತಾಲೂಕಿನ ತೂರಾಂಡಹಳ್ಳಿಯ ಉಲ್ಲಾಸ್ ಗೌಡ ಮತ್ತು ಮಾನಸ ವಿವಾಹವಾಗಿದ್ದರು.

ಉಲ್ಲಾಸ್ ಗೌಡ ಕುಟುಂಬಸ್ಥರು ಮಾನಸಳಿಗೆ ವರದಕ್ಷಿಣೆ ವಿಚಾರವಾಗಿ ಮಾನಸಿಕವಾಗಿ ಕಿರುಕುಳ ನೀಡುತ್ತಿದ್ದರು ಎಂದು ಹೇಳಲಾಗಿದೆ. ರಾಜಿ ಸಂಧಾನ ಸಫಲವಾಗದ ಹಿನ್ನೆಲೆ, ವಿಚ್ಛೇದನಕ್ಕೆ ಅರ್ಜಿ ಹಾಕಿಕೊಳ್ಳಲಾಗಿತ್ತು. ಪರಿಣಾಮ ಉಲ್ಲಾಸ್ ಗೌಡ ತನ್ನ ಪತ್ನಿ ಮಾನಸಳನ್ನು ತವರು ಮನೆಗೆ ಕಳುಹಿಸಿದ್ದ.

ನಂತರ ಉಲ್ಲಾಸ್ ಗೌಡ ವಿಚ್ಛೇದನ ಪಡೆದುಕೊಳ್ಳುವ ಉದ್ದೇಶದಿಂದ ವಕೀಲರ ಕಡೆಯಿಂದ ಪತ್ನಿಯ ಮನೆಗೆ ನೋಟಿಸ್ ಕಳುಹಿಸಿದ್ದ. ಇದರಿಂದ ಬೇಸತ್ತು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಮಾನಸ ಕುಟುಂಬಸ್ಥರು ಆರೋಪಿಸಿದ್ದಾರೆ.

 

Related Articles

Leave a Reply

Your email address will not be published. Required fields are marked *

Back to top button