Homeಅಂಕಣಜನಮನಪ್ರಮುಖ ಸುದ್ದಿ

ತೋಟಗಾರಿಕೆ ಇಲಾಖೆಯಿಂದ ಸಹಾಯಧನ ನೀಡಲು ಅರ್ಜಿ ಆಹ್ವಾನ

ಬೆಂಗಳೂರು: ತೋಟಗಾರಿಕೆ ಇಲಾಖೆಯಿಂದ ವಿವಿಧ ಯಂತ್ರೋಪಕರಣಗಳಿಗೆ ಸೇರಿದಂತೆ ಇತರೆ ಸೌಲಭ್ಯ ಪಡೆಯಲು ಅರ್ಹ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ಯಾರೆಲ್ಲ ಅರ್ಜಿ ಸಲ್ಲಿಸಬಹುದು..? ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲೆಗಳೇನು..? ಇಲ್ಲಿದೆ ವಿವರ.

ಯಾರೆಲ್ಲ ಅರ್ಜಿ ಸಲ್ಲಿಸಬಹುದು..?

  • ತೋಟಗಾರಿಕೆ ಇಲಾಖೆಯಿಂದ ಸಣ್ಣ ಟ್ರ್ಯಾಕ್ಟರ್,
  • ಡ್ರಾಗನ್ ಪ್ರೂಟ್, ಈರುಳ್ಳಿ ಶೇಖರಣಾ ಘಟಕಕ್ಕೆ ಸಹಾಯಧನ
  • ಅಡಿಕೆ, ಕಾಳುಮೆಣಸು, ಕೋಕೋ ಮುಂತಾದ ತೋಟಗಾರಿಕೆ ಬೆಳೆಗಳನ್ನು ಬೆಳೆಯುತ್ತಿರುವ ಪರಿಶಿಷ್ಟ ಜಾತಿಯ ಅರ್ಹ ರೈತರಿಗೆ ಪ್ರಾಥಮಿಕ ಸಂಸ್ಕರಣಾ ಘಟಕ ಸ್ಥಾಪಿಸಲು ಸಹಾಯಧನ
  • ಹಾಗೂ ಎಲ್ಲಾ ವರ್ಗದ ರೈತರಿಗೆ ಹಸಿರು ಮನೆ ನಿರ್ಮಿಸಿಕೊಳ್ಳಲು, 9000 ಸಿಎಂಟಿ ಸಾಮರ್ಥ್ಯದ ನೀರು ಸಂಗ್ರಹಣಾ ಘಟಕ ನಿರ್ಮಾಣಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
  • ಎಲ್ಲಿ ಅರ್ಜಿ ಸಲ್ಲಿಸಬೇಕು

    ಆಸಕ್ತ ಅರ್ಹ ರೈತರು ಈ ಯೋಜನೆಯಡಿ ಸೌಲಭ್ಯವನ್ನು ಪಡೆಯಲು ತಮ್ಮ ತಾಲ್ಲೂಕಿನ ಹಿರಿಯ ತೋಟಗಾರಿಕೆ ನಿರ್ದೇಶಕರ ಕಚೇರಿ/ತೋಟಗರಿಕೆ ಇಲಾಖೆ ಕಚೇರಿಯನ್ನು ನೇರವಾಗಿ ಭೇಟಿ ಮಾಡಿ ಅಗತ್ಯ ದಾಖಲಾತಿಗಳನ್ನು ಒದಗಿಸಿ ಅರ್ಜಿ ಸಲ್ಲಿಸಬೇಕು.

    ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು:

    • ಅರ್ಜಿದಾರರ ಅಧಾರ್ ಕಾರ್ಡ್ ಪ್ರತಿ.
    • ಬ್ಯಾಂಕ್ ಪಾಸ್ ಬುಕ್ ಪ್ರತಿ.
    • ಪೋಟೋ.
    • ಪಹಣಿ/ಉತಾರ್/RTC.
    • ರೇಷನ್ ಕಾರ್ಡ ಪ್ರತಿ.
    • ಜಂಟಿ ಮಾಲೀಕರ ಖಾತೆಯಿದಲ್ಲಿ ಎಲ್ಲಾ ಮಾಲೀಕರ ಒಪ್ಪಿಗೆ ಪ್ರಮಾಣ ಪತ್ರ.

    ಅನುದಾನ ಲಭ್ಯತೆ ಆಧಾರದ ಮೇಲೆ ಅರ್ಜಿ ಸಲ್ಲಿಸಿದ ನಂತರ ಅರ್ಜಿದಾರರ ಅರ್ಜಿಗಳನ್ನು ಪರಿಶೀಲನೆ ಮಾಡಿ ಅರ್ಹ ಫಲಾನುಭವಿಗಳನ್ನು ಗುರುತಿಸಿ ಫಲಾನುಭವಿಗಳನ್ನು ಆಯ್ಕೆ ಮಾಡಲಾಗುತ್ತದೆ.

Related Articles

Leave a Reply

Your email address will not be published. Required fields are marked *

Back to top button