ಪ್ರಮುಖ ಸುದ್ದಿ
ತುಮಕೂರು : ಧಗಧಗನೇ ಹೊತ್ತಿ ಉರಿದ ಅನಿಲ್ ಟ್ಯಾಂಕರ್ !
ತುಮಕೂರು : ಗುಬ್ಬಿ ತಾಲ್ಲೂಕಿನ ಸೋಮಲಾಪುರ ಸಮೀಪ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಅನಿಲ ಟ್ಯಾಂಕರ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಏಕಾಏಕಿ ಹೊತ್ತಿ ಉರಿದ ಘಟನೆ ನಡೆದಿದೆ. ಮೈಸೂರಿನಿಂದ ದೆಹಲಿಯತ್ತ ತೆರಳುತ್ತಿದ್ದ ಅನಿಲ ಟ್ಯಾಂಕರ್ ಬೆಂಕಿಗಾಹುತಿ ಆಗಿದೆ. ಅದೃಷ್ಟವಶಾತ್ ಟ್ಯಾಂಕರ್ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಅಗ್ನಿ ಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವ ಮೂಲಕ ಹೆಚ್ಚಿನ ಅನಾಹುತ ತಪ್ಪಿಸಿದ್ದಾರೆ. ಚೌಳೂರು ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.