ಪ್ರಮುಖ ಸುದ್ದಿ
ಬಿಎಸ್ ವೈ ಸಾಮಾಜಿಕ ನ್ಯಾಯ ಮರೆತಿದ್ದಾರೆ : ಇಮ್ಮಡಿ ಶ್ರೀ
ಬಾಗಲಕೋಟೆ : ಬಿ.ಎಸ್.ಯಡಿಯೂರಪ್ಪ ಸಚಿವ ಸಂಪುಟದಲ್ಲಿ ಬೋವಿ ಸಮಾಜದ ಒಬ್ಬರಿಗೂ ಸಚಿವ ಸ್ಥಾನ ನೀಡಿಲ್ಲ. ಆ ಮೂಲಕ ಯಡಿಯೂರಪ್ಪ ಅವರು ಸಾಮಾಜಿಕ ನ್ಯಾಯ ಮರೆತಿದ್ದಾರೆಂಬುದು ಸ್ಪಷ್ಟವಾಗಿದೆ ಎಂದು ಬೋವಿ ಗುರುಪೀಠದ ಇಮ್ಮಡಿ ಸಿದ್ಧರಾಮೇಶ್ವರ ಶ್ರೀ ಆರೋಪಿಸಿದ್ದಾರೆ. ಮುಖ್ಯಮಂತ್ರಿಗಳಿಗೆ ಈ ಬಗ್ಗೆ ಪತ್ರ ಬರೆದು ತಿಳಿಸುತ್ತೇನೆ. ಎರಡು ದಿನದಲ್ಲಿ ಸಮಾಜದ ಮುಖಂಡರ ಸಭೆ ಕರೆದು ಚರ್ಚಿಸಿ ಸಮಾಜದ ಮುಂದಿನ ನಡೆ ಬಗ್ಗೆ ಪ್ರಕಟಿಸುತ್ತೇವೆ ಎಂದು ಅವರು ತಿಳಿಸಿದ್ದಾರೆ.