ಕ್ಯಾಂಪಸ್ ಕಲರವಪ್ರಮುಖ ಸುದ್ದಿ
ಅಧಿಕಾರಿಗಳಿಗೆ ಶಾಕ್ ನೀಡಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ
ಬೆಂಗಳೂರು: ವಿಧಾನಸೌಧದ ಸ್ವೀಕೃತಿ ಕಚೇರಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ದಿಢೀರ್ ಭೇಟಿ ನೀಡಿದ್ದಾರೆ. ಸಿಎಂ ಭೇಟಿ ಸಂದರ್ಭದಲ್ಲಿ ಅಧಿಕಾರಿಗಳು ಸಮಯಕ್ಕೆ ಸರಿಯಾಗಿ ಕಚೇರಿಗೆ ಬಾರದ್ದನ್ನು ಕಂಡು ಕಿಡಿ ಕಾರಿದ್ದಾರೆ. ನಿಗದಿತ ಸಮಯದಲ್ಲಿ ಕಚೇರಿಯಲ್ಲಿರಬೇಕು ಇಲ್ಲವಾದಲ್ಲಿ ಮುಲಾಜಿಲ್ಲದೆ ನಿರ್ಲಕ್ಷ ತೋರುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಖಡಕ್ ಎಚ್ಚರಿಕೆ ನೀಡಿದ್ದಾರೆ.
ಸಿಎಂ ದಿಡೀರ್ ಭೇಟಿಯಿಂದ ವಿಧಾನಸೌಧದಲ್ಲಿನ ವಿವಿಧ ಕಚೇರಿಗಳ ಅಧಿಕಾರಿಗಳು ಶಾಕ್ ಆಗಿದ್ದಾರೆ. ಯಾವ ಸಮಯದಲ್ಲಿ ಸಿಎಂ ಯಡಿಯೂರಪ್ಪ ಕಚೇರಿಗಳಿಗೆ ಭೇಟಿ ನೀಡಿ ಏನು ಕ್ರಮ ಕೈಗೊಳ್ಳುವರೋ ಎಂದು ಭೀತಿಗೊಂಡಿದ್ದಾರೆ. ಆ ಮೂಲಕ ಸಿಎಂ ಅಚ್ಚರಿಯ ಭೇಟಿ ಅಧಿಕಾರಿಗಳಲ್ಲಿ ನಡುಕ ಹುಟ್ಟಿಸಿದೆ.