ಕರಾವಳಿ,ಮಲೆನಾಡು ಭಾಗದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ; ಆಗಸ್ಟ್ 31ರವರೆಗೆ ಮೀನುಗಾರರಿಗೆ ಅಲರ್ಟ್

ಬೆಂಗಳೂರು: ಕರ್ನಾಟಕದ ಕರಾವಳಿ ಭಾಗಗಳಲ್ಲಿ ವ್ಯಾಪಕ ಹಗುರದಿಂದ ಸಾಧಾರಣ ಮಳೆಯಾಗುವ (rain News) ಸಾಧ್ಯತೆಯಿದೆ. ಮಲೆನಾಡಿನಲ್ಲಿ ಚದುರಿದಂತೆ ಮಳೆಯಾದರೆ, ಒಳನಾಡಿನಲ್ಲಿ ಮಧ್ಯಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.
ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ ಹಾಗೂ ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರದಲ್ಲಿ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ.
ಇನ್ನು ಉತ್ತರ ಒಳನಾಡಿನ ಬೆಳಗಾವಿ, ಹಾವೇರಿ, ರಾಯಚೂರು, ಯಾದಗಿರಿ, ಕಲಬುರಗಿ ಮತ್ತು ಬೀದರ್ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಧಾರವಾಡ, ಬಾಗಲಕೋಟೆ, ಗದಗ, ಕೊಪ್ಪಳ, ವಿಜಯಪುರದಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆಯಾಗಲಿದೆ.
ಆಗಸ್ಟ್ 31ರವರೆಗೆ ಕರ್ನಾಟಕದ ಕರಾವಳಿಯಲ್ಲಿ ಗಂಟೆಗೆ 35 ರಿಂದ 45 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಹೀಗಾಗಿ ಕರಾವಳಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.