ಪ್ರಮುಖ ಸುದ್ದಿ
2ನೇ ರಾಜಧಾನಿ ಬಗ್ಗೆ ಸಿಎಂ ಹೇಳಿಕೆಗೆ ಸಚಿವ ಖರ್ಗೆ ಹೇಳಿದ್ದೇನು ಗೊತ್ತಾ?
ಬೆಂಗಳೂರು: ರಾಜ್ಯದ ಎಲ್ಲಾ ಭಾಗವೂ ಸರ್ವತೋಮುಖ ಅಭಿವೃದ್ಧಿ ಕಾಣಬೇಕು. ಆಗ ಮಾತ್ರ ಪ್ರಾದೇಶಿಕ ಅಸಮತೋಲನೆ ನಿವಾರಣೆ ಸಾಧ್ಯ. ಎರಡನೇ ರಾಜಧಾನಿ ರಚನೆಯಿಂದ ಅಭಿವೃದ್ಧಿ ಸಾಧ್ಯ ಎಂಬುದರಲ್ಲಿ ನನಗೆ ನಂಬಿಕೆಯಿಲ್ಲ. ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಯಾವ ಅರ್ಥದಲ್ಲಿ ಎರಡನೇ ರಾಜಧಾನಿ ಬಗ್ಗೆ ಮಾತನಾಡಿದ್ದಾರೋ ಗೊತ್ತಿಲ್ಲ ಎಂದು ಸಚಿವ ಪ್ರಿಯಾಂಕ ಖರ್ಗೆ ಹೇಳಿದ್ದಾರೆ. ವಿಧಾನಸೌಧದಲ್ಲಿ ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಚಿವ ಪ್ರಿಯಾಂಕ ಖರ್ಗೆ ರಾಜ್ಯದ ಸರ್ವತೋಮುಖ ಅಭಿವೃದ್ಧಿ ಆಗಬೇಕು ಎಂದಿದ್ದಾರೆ.