Homeಜನಮನಪ್ರಮುಖ ಸುದ್ದಿಮಹಿಳಾ ವಾಣಿ
ಇಂತಹವರಿಗೆ ಮುಂದಿನ ತಿಂಗಳಿನಿಂದ ಸಿಗಲ್ಲ ರೇಷನ್; ಸಂಪೂರ್ಣ ಮಾಹಿತಿ ಇಲ್ಲಿದೆ

(ration card:-) ration card:-ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಯ ಲಾಭ ಪಡೆಯಲು ರೇಷನ್ ಮುಖ್ಯ ದಾಖಲೆಯಾಗಿದೆ. ಹಾಗೆಯೇ ಸರ್ಕಾರದ ಯಾವುದೇ ಯೋಜನೆಯ ಲಾಭ ಪಡೆಯಲು ರೇಷನ್ ಕಾರ್ಡ್ ಮುಖ್ಯ. ಆದರೆ ಕೆಲವು ಪಡಿತರ ಚೀಟಿದಾರರಿಗೆ ಮುಂದಿನ ತಿಂಗಳಿನಿಂದ ಉಚಿತ ಪಡಿತರ ಸಿಗುವುದಿಲ್ಲ. ಯಾಕೆ ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.
ರೇಷನ್ ಕಾರ್ಡ್ಗೆ ಇ-ಕೆವೈಸಿ ಕಡ್ಡಾಯವಾಗಿದ್ದು, ಸೆಪ್ಟೆಂಬರ್ 30 ಕೊನೆಯ ದಿನಾಂಕವಾಗಿದೆ. ಪಡಿತರ ಚೀಟಿದಾರರು ಸೆಪ್ಟೆಂಬರ್ 30 ರೊಳಗೆ ಇ-ಕೆವೈಸಿಯನ್ನು ಪೂರ್ಣಗೊಳಿಸದಿದ್ದರೆ. ಆ ಪಡಿತರ ಚೀಟಿದಾರರಿಗೆ ಸರ್ಕಾರ ನೀಡುವ ಉಚಿತ ಪಡಿತರವನ್ನು ನಿಲ್ಲಿಸಲಾಗುವುದು.
ನೀವು ಇನ್ನೂ ಇ-ಕೆವೈಸಿ ಪ್ರಕ್ರಿಯೆಯನ್ನು ಪೂರ್ಣಗೊಳಿಸದಿದ್ದರೆ. ನಿಮ್ಮ ನ್ಯಾಯ ಬೆಲೆ ಅಂಗಡಿಗೆ ಹೋಗಿ ಮಾಡಿಸಬಹುದಾಗಿದೆ.