ಪ್ರಮುಖ ಸುದ್ದಿ

ಪೊಲೀಸ್ ವಾಹನದ ಮೇಲೆ ಕಲ್ಲು ತೂರಾಟ, ಲಾಠಿಚಾರ್ಜ್, 15ಜನರಿಗೆ ಗಾಯ

ಬೀದರ್: ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ಖಂಡಿಸಿ ಹಿಂದೂ ಸಂಘಟನೆಗಳು ಬೀದರ್ ಬಂದ್ ಕರೆ ನೀಡಿವೆ. ಹೀಗಾಗಿ, ಜಿಲ್ಲಾಧಿಕಾರಿ ಕಚೇರಿ ಸಮೀಪ ವಿವಿಧ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ತೀವ್ರ ಪ್ರತಿಬಟನೆ ನಡೆಸುತ್ತಿದ್ದಾರೆ. ಪ್ರತಿಭಟನೆ ನಿಯಂತ್ರಿಸಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ.

ಇದೇ ವೇಳೆ ಪೊಲೀಸರ ವಿರುದ್ಧ ಪ್ರತಿಭಟನೆ ಹತ್ತಿಕ್ಕುತ್ತಿರುವ ಆರೋಪ ಮಾಡಿದ ಪ್ರತಿಭಟನಾಕಾರರು ಕಲ್ಲು ತೂರಾಟ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪೊಲೀಸ್ ವಾಹನಗಳ ಮೇಲೆ ಕಲ್ಲು ತೂರಾಟ ನಡೆದಿದ್ದು ಪೊಲೀಸ್ ಜೀಪುಗಳ ಗ್ಲಾಸ್ ಗಳು ಜಖಂಗೊಂಡಿವೆ. ಹೀಗಾಗಿ, ಪೊಲೀಸರು ಪ್ರತಿಭಟನಾಕಾರರ ಮೇಲೆ ಲಾಠಿಚಾರ್ಜ್ ನಡೆಸಿದ್ದಾರೆ‌.

ಪೊಲೀಸರು ಎರಡು ಸುತ್ತು ಲಾಠಿ ಪ್ರಹಾರ ನಡೆಸಿದ್ದಾರೆ. ಪರಿಣಾಮ ಪ್ರತಿಭಟನಾಕಾರರು ದಿಕ್ಕಾಪಾಲಾಗಿ ಓಡಿದ್ದು ಒಬ್ಬರ ಮೇಲೊಬ್ಬರಿ ಬಿದ್ದಿದ್ದಾರೆ. ಪರಿಣಾಮ ಲಾಠಿಚಾರ್ಜಿನಿಂದಾಗಿ 15 ಕ್ಕೂ ಹೆಚ್ಚು ಜನ ಗಾಯಗೊಂಡಿದ್ದು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button