ಬಸವಭಕ್ತಿ
ವಿನಯವಾಣಿ ‘ವಚನ ಸಿಂಚನ’ : ಕಲ್ಲು ಲಿಂಗವಲ್ಲ, ಮಣ್ಣು ದೇವರಲ್ಲ…
ಕಲ್ಲು ಲಿಂಗವಲ್ಲ, ಉಳಿಯ ಮೊನೆಯಲ್ಲಿ ಒಡೆಯಿತ್ತು.
ಮರ ದೇವರಲ್ಲ, ಉರಿಯಲ್ಲಿ ಬೆಂದಿತ್ತು.
ಮಣ್ಣು ದೇವರಲ್ಲ, ನೀರಿನ ಕೊನೆಯಲ್ಲಿ ಕದಡಿತ್ತು.
ಇಂತಿವನೆಲ್ಲವನರಿವ ಚಿತ್ತ ದೇವರಲ್ಲ.
ಕರಣಂಗಳ ಮೊತ್ತದೊಳಗಾಗಿ ಸತ್ವಗೆಟ್ಟಿತ್ತು.
ಇಂತಿವ ಕಳೆದುಳಿದ ವಸ್ತುವಿಪ್ಪೆಡೆ ಯಾವುದೆಂದಡೆ :
ಕಂಡವರೊಳಗೆ ಕೈಕೊಂಡಾಡದೆ,
ಕೊಂಡ ವ್ರತದಲ್ಲಿ ಮತ್ತೊಂದನೊಡಗೂಡಿ ಬೆರೆಯದೆ,
ವಿಶ್ವಾಸ ಗ್ರಹಿಸಿ ನಿಂದಲ್ಲಿ ಆ ನಿಜಲಿಂಗವಲ್ಲದೆ,
ಮತ್ತೊಂದು ಪೆರತನರಿಯದೆ ನಿಂದಾತನೆ ಸರ್ವಾಂಗಲಿಂಗಿ,
ವೀರಬೀರೇಶ್ವರಲಿಂಗದೊಳಗಾದ ಶರಣ.
–ವೀರ ಗೊಲ್ಲಾಳ/ಕಾಟಕೋಟ