ಪ್ರಮುಖ ಸುದ್ದಿ

ಸಂಸದ ಪ್ರತಾಪ ಸಿಂಹ ಸೇರಿ 50ಜನ ಹನುಮ ಭಕ್ತರ ಬಂಧನ!

ಮೈಸೂರು: ಹುಣಸೂರು ಪಟ್ಟಣದಲ್ಲಿ ಇಂದು ಹನುಮ ಜಯಂತಿ ಪ್ರಯುಕ್ತ ಮೆರವಣಿಗೆ ಆಯೋಜಿಸಲಾಗಿದೆ. ಇಡೀ ಪಟ್ಟಣ ಕೇಸರಿಮಯವಾಗಿ ಕಂಗೊಳಿಸುತ್ತಿದೆ. ಮೈಸೂರು ಬಿಜೆಪಿ ಸಂಸದ ಪ್ರತಾಪ ಸಿಂಹ ಹನುಮ ಮಾಲೆ ಧರಿಸಿ ಹನುಮ ಜಯಂತಿಯ ಮೆರವಣಿಗೆಯಲ್ಲಿ ಪಾಲ್ಗೊಳ್ಳಲು ಸಿದ್ಧರಾಗಿದ್ದರು. ಅಲ್ಲದೆ ಕೇಂದ್ರ ಸಚಿವ ಅನಂತಕುಮಾರ್ ಹೆಗಡೆ ಸಹ ಮೆರವಣಿಗೆಯಲ್ಲಿ ಭಾಗಿಯಾಗಲಿದ್ದರು.

ಆದರೆ, ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲಾಡಳಿತದಿಂದ ಪಟ್ಟಣದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು ಮೆರವಣಿಗೆಗೆ ಪೊಲೀಸರು ಪರವಾನಿಗೆ ನೀಡಿಲ್ಲ. ಹೀಗಾಗಿ, ಪೊಲೀಸರು ಸಂಸದ ಪ್ರತಾಪ ಸಿಂಹ ಸೇರಿದಂತೆ 50ಜನ ಹನುಮ ಭಕ್ತರನ್ನು ಬಂಧಿಸಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button