ಪ್ರಮುಖ ಸುದ್ದಿ
ಮತ್ತೆ ಬೆಂಗಳೂರಿನ ಬಿಜಿಎಸ್ ಗ್ಲೋಬಲ್ ಆಸ್ಪತ್ರೆಗೆ ದಾಖಲಾದ ಡಾ.ಶಿಮುಶ!
ಬೆಂಗಳೂರು : ಅನಾರೋಗ್ಯ ಹಿನ್ನೆಲೆಯಲ್ಲಿ ಚಿತ್ರದುರ್ಗದ ಮುರುಘಾಮಠದ ಡಾ.ಶಿವಮೂರ್ತಿ ಮುರುಘಾ ಶರಣರು ಮತ್ತೆ ಬೆಂಗಳೂರಿನ ಬಿಜಿಎಸ್ ಗ್ಲೋಬಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಜೂನ್ 8ರಂದು ಆಸ್ಪತ್ರೆಗೆ ದಾಖಲಾಗಿ ಚಿಕತ್ಸೆ ಪಡೆದಿದ್ದ ಅವರು ಜೂನ್ 11ರಂದು ಡಿಸ್ಚಾರ್ಜ್ ಆಗಿದ್ದು ಮುರುಘಾಮಠಕ್ಕೆ ಮರಳಿದ್ದರು. ಆದರೆ, ನಿನ್ನೆ ಜೂನ್ 15ರಂದು ಮತ್ತೆ ಅನಾರೋಗ್ಯದಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಕಫಾ ಕಟ್ಟಿದ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಮುರುಘಾಶ್ರೀಗಳು ಬಿಜಿಎಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಭಕ್ತರು ಯಾವುದೇ ಆತಂಕ ಪಡುವ ಆಗತ್ಯ ಇಲ್ಲ. ಇಂದು ಜೂನ್ 16ರಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮುರುಘಾಮಠಕ್ಕೆ ಬರುವ ಸಾಧ್ಯತೆ ಇದೆ ಎಂದು ಮಠದ ಮೂಲಗಳಿಂದ ತಿಳಿದು ಬಂದಿದೆ.