ಪ್ರಮುಖ ಸುದ್ದಿ

ಯಾದಗಿರಿಃ ಮೈಲಾಪುರ ಜಾತ್ರೆ ರದ್ದು

ಯಾದಗಿರಿಃ ಮೈಲಾಪುರ ಜಾತ್ರೆ ರದ್ದು
ಯಾದಗಿರಿಃ ಕೋವಿಡ್-19 ಮಹಾಮಾರಿ ತಡೆಗೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕಾಗಿರುವ ಹಿನ್ನೆಲೆ ಕೋವಿಡ್-19 ನಿಯಮಾವಳಿಯಂತೆ 2021 ನೇ ಸಾಲಿನ ಜನೇವರಿಯಲ್ಲಿ ನಡೆಯಬೇಕಿದ್ದ ಮೈಲಾಪುರದ ಶ್ರೀ ಮೈಲಾರಲಿಂಗೇಶ್ವರ ದೇವಸ್ಥಾನದ ಜಾತ್ರೆಯನ್ನು ರದ್ದುಪಡಿಸಲಾಗಿದ್ದು, ಭಕ್ತಾಧಿಗಳು ಸಹಕರಿಸಬೇಕೆಂದು ಜಿಲ್ಲಾಡಳಿತ ಪ್ರಕಟಣೆ ಮೂಲಕ ಕೋರಿದೆ.

ಈ ಕುರಿತು ಇದೇ ಡಿ.29ರಂದು ನಡೆದ ವ್ಯವಸ್ಥಾಪನಾ ಸಮಿತಿ ಸಭೆಯಲ್ಲಿ ಕೂಲಂಕುಷವಾಗಿ ಚರ್ಚೆ ನಡೆಸಲಾಗಿದ್ದು, ಅದರಂತೆ ಜಾತ್ರಾ ಮಹೋತ್ಸವದಲ್ಲಿ ಜಿಲ್ಲೆ ಸೇರಿದಂತೆ ಹೊರ ಜಿಲ್ಲೆಗಳು ಹಾಗೂ ಅಂತರಾಜ್ಯಗಳಿಂದಲ್ಲೂ ಭಕ್ತಾಧಿಗಳು ಆಗಮಿಸುವರು, ಈ ಸಂದರ್ಭದಲ್ಲಿ ಸಾರ್ವಜನಿಕರು ಹಾಗೂ ಭಕ್ತಾಧಿಗಳ ಆರೋಗ್ಯ ಸುರಕ್ಷತೆಯ ದೃಷ್ಟಿಯಿಂದ ಕೋವಿಡ್-19 ಸೋಂಕು ಹರಡದಂತೆ ತಡೆಗಟ್ಟಲು 2021ರ ಜನವರಿ 13 ರಿಂದ 18ರ ವರೆಗೆ ನಡೆಯಬೇಕಿದ್ದ ಮೈಲಾಪುರದ ಶ್ರೀ ಮೈಲಾರಲಿಂಗೇಶ್ವರ ದೇವಸ್ಥಾನದ ಜಾತ್ರಾ ಉತ್ಸವವನ್ನು ರದ್ದುಪಡಿಸಲಾಗಿದೆ. ಕಾರಣ ಭಕ್ತಾಧಿಗಳು ಹಾಗೂ ಸಾರ್ವಜನಿಕರು ಸಹಕರಿಸಬೇಕು. ಕೋವಿಡ್ ನಿಯಮಗಳನ್ನು ಎಲ್ಲರೂ ಕಡ್ಡಾಯವಾಗಿ ಪಾಲಿಸಬೇಕೆಂದು ಜಿಲ್ಲಾಡಳಿತ ತಿಳಿಸಿದೆ.

Related Articles

Leave a Reply

Your email address will not be published. Required fields are marked *

Back to top button