ಪ್ರಮುಖ ಸುದ್ದಿ

ಬೆಳಗಾವಿ ಶಾಸಕರಿಗೆ ಸಚಿವ ಸ್ಥಾನ : ಸಿಎಂ ಬಿಎಸ್ ವೈ ಘೋಷಣೆ

ನವದೆಹಲಿ : ಮಾಜಿ ಶಾಸಕ ಲಕ್ಷ್ಮಣ ಸವದಿಗೆ ಸಚಿವ ಸಂಪುಟ ಸ್ಥಾನಮಾನ ನೀಡಿದ್ದಕ್ಕೆ ಪಕ್ಷದಲ್ಲಿ ಅಸಮಾಧಾನ ಇರುವುದು ನಿಜ. ಆದರೆ, ಹೈಕಮಾಂಡ್ ಸೂಚನೆ ಮೇರೆಗೆ ಲಕ್ಷ್ಮಣ ಸವದಿಗೆ ಅವಕಾಶ ಕಲ್ಪಿಸಲಾಗಿದೆ. ಇಷ್ಟರಲ್ಲೇ ಬೆಳಗಾವಿಯ ಶಾಸಕರೊಬ್ಬರಿಗೆ ಸಚಿವ ಸಂಪುಟದಲ್ಲಿ ಸ್ಥಾನ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ಆದರೆ, ಬೆಳಗಾವಿ ಜಿಲ್ಲೆಯ ಶಾಸಕರಾದ ಉಮೇಶ ಕತ್ತಿ, ಬಾಲಚಂದ್ರ ಜಾರಕಿಹೊಳಿ ಮಂತ್ರಿಗಿರಿಯ ರೇಸ್ ನಲ್ಲಿದ್ದು ಆ ಪೈಕಿ ಯಾರಿಗೆ ಮಂತ್ರಿ ಭಾಗ್ಯ ಒಲಿಯಲಿದೆ ಎಂಬ ಪ್ರಶ್ನೆ ಉದ್ಭವಿಸಿದೆ. ಸದ್ಯ ಬಾಲಚಂದ್ರ ಜಾರಕಿಹೊಳಿಗೆ ಕೆಎಂಎಫ್ ಅದ್ಯಕ್ಷರನ್ನಾಗಿಸಲು ಬಿಜೆಪಿ ತಂತ್ರ ರೂಪಿಸಿದೆ. ಹೀಗಾಗಿ, ಸಿಡಿದೆದ್ದಿರುವ ಉಮೇಶ್ ಕತ್ತಿಗೆ ಮಂತ್ರಿ ಸ್ಥಾನ ನೀಡಿ ಸಮಾಧಾನ ಪಡಿಸಲು ಬಿಎಸ್ ವೈ ನಿರ್ಧರಿಸಿದ್ದಾರೆ ಎನ್ನಲಾಗಿದೆ.

Related Articles

Leave a Reply

Your email address will not be published. Required fields are marked *

Back to top button