ಪ್ರಮುಖ ಸುದ್ದಿ

ನೂತನ ತಾಲೂಕಾಭಿವೃದ್ಧಿಗೆ 5 ಕೋಟಿ ಅನುದಾನಃ ಸಭೆಯಲ್ಲಿ ಡಿಸಿ ಮಂಜುನಾಥ ಹೇಳಿಕೆ

ನೂತನ ತಾಲೂಕುಗಳಿಗೆ ಗ್ರಾಮಗಳ ಸೇರ್ಪಡೆ ಕುರಿತು ಸಭೆ

ಯಾದಗಿರಿಃ ಜಿಲ್ಲೆಯಲ್ಲಿ ನೂತನವಾಗಿ ರಚನೆಗೊಂಡ ಗುರುಮಠಕಲ್, ವಡಗೇರಾ ಹಾಗೂ ಹುಣಸಗಿ ತಾಲೂಕಗಳಿಗೆ ಗ್ರಾಮಗಳ ಸೇರ್ಪಡೆ ಕುರಿತು ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಜೆ.ಮಂಜುನಾಥ್ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಸಲಾಯಿತು.

ಗ್ರಾಮ ಪಂಚಾಯಿತಿಗಳಾದ ಗೆದ್ದಲಮರಿ, ಬೈಲಕುಂಟಿ, ಕಾಮನಟಗಿ, ಕಚಕನೂರು, ಹೆಬ್ಬಾಳ-ಬಿ. ಇವುಗಳ ವ್ಯಾಪ್ತಿಗೆ ಸೇರಿದ ಗ್ರಾಮಗಳನ್ನು ನೂತನ ಹುಣಸಗಿ ತಾಲೂಕಿಗೆ ಸೇರ್ಪಡೆ ಮಾಡುವ ಬಗ್ಗೆ ಚರ್ಚಿಸಲಾಯಿತು.

ಗುರುಮಠಕಲ್ ತಾಲೂಕಿಗೆ ಅಜಲಾಪುರ ಗ್ರಾಮ ಪಂಚಾಯಿತಿಗೆ ಸೇರಿದ ಬದ್ದೆಪ್ಪಲ್ಲಿ ಗ್ರಾಮವನ್ನು ಹಾಗೂ ವಡಗೇರಾ ತಾಲೂಕಿಗೆ ಮಾಲಹಳ್ಳಿ, ಗಡ್ಡೆಸೂಗೂರು, ತೇಗರಾಳ, ಬಬಲಾದ ಗ್ರಾಮಗಳನ್ನು ಸೇರ್ಪಡೆ ಮಾಡುವ ಕುರಿತು ಸಭೆಯಲ್ಲಿ ನಿರ್ಣಯಿಸಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಜೆ.ಮಂಜುನಾಥ್ ಅವರು ಮಾತನಾಡಿ, ನೂತನ ತಾಲೂಕುಗಳ ಅಭಿವೃದ್ಧಿಗಾಗಿ ಸರ್ಕಾರ ಪ್ರತಿ ತಾಲೂಕಿಗೆ 5 ಕೋಟಿ ರೂ.ಅನುದಾನ ನೀಡಿದ್ದು, ಗುರುಮಠಕಲ್, ಹುಣಸಗಿ ಹಾಗೂ ವಡಗೇರಾ ತಾಲೂಕಗಳಲ್ಲಿ ವಿವಿಧ ಇಲಾಖೆ ಕಚೇರಿಗಳ ಸ್ಥಾಪಿಸಲು ಸ್ಥಳಾವಕಾಶ ಹಾಗೂ ಕಟ್ಟಡಗಳನ್ನು ಬಾಡಿಗೆ ರೂಪದಲ್ಲಿ ಪಡೆಯಲು ಅಗತ್ಯ ತಯಾರಿ ಮಾಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.

ಶೆಡ್ಯೂಲ್ 112 ಪ್ರಕಾರ ಗ್ರಾಮಗಳ ಸೇರ್ಪಡೆ ಹಾಗೂ ಬದಲಾವಣೆ ಮಾಡಲಾಗುತ್ತಿದೆ. ನೂತನ ತಾಲೂಕಗಳಿಗೆ ಸೇರ್ಪಡೆ ಮಾಡಿದ ಗ್ರಾಮಗಳ ವರದಿಯನ್ನು ತಯಾರಿಸಿ ಸಲ್ಲಿಸಬೇಕು ಎಂದು ಸಂಬಂಧಿಸಿದ ಆಯಾ ತಹಶೀಲ್ದಾರರಿಗೆ ಸೂಚಿಸಿದರು.

ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಡಾ:ಜಗದೀಶ ನಾಯಕ್, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಅವಿನಾಶ್ ಮೆನನ್ ರಾಜೇಂದ್ರನ್ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.

Related Articles

Leave a Reply

Your email address will not be published. Required fields are marked *

Back to top button