ಪ್ರಮುಖ ಸುದ್ದಿ

ಬೆಂಗಳೂರು: ನಾಳೆಯಿಂದ ಸೆಪ್ಟೆಂಬರ್‌ 11ರವರೆಗೂ ಪೀಣ್ಯ ಇಂಡಸ್ಟ್ರಿ ಟು ನಾಗಸಂದ್ರ ಮೆಟ್ರೋ ಸಂಚಾರ ಸ್ಥಗಿತ

ಬೆಂಗಳೂರು: ನಮ್ಮ ಮೆಟ್ರೋ ಹಸಿರು ಮಾರ್ಗದ ನಾಗಸಂದ್ರದಿಂದ ಮಾದವರ ನಡುವೆ ಸಿಗ್ನಲಿಂಗ್ ಸಂಬಂಧಿತ ಪರೀಕ್ಷೆಯನ್ನು ನಮ್ಮ ಮೆಟ್ರೋ ಕೈಗೆತ್ತಿಕೊಂಡಿದೆ. ಹೀಗಾಗಿ ಕೆಲವು ದಿನಗಳ ಕಾಲ ರೈಲು ಸೇವೆಯ ಸಮಯ ಮತ್ತು ಕಾರ್ಯಾಚರಣೆಗಳಲ್ಲಿ ಬದಲಾವಣೆಯಾಗಲಿದೆ ಎಂದು ಬಿಎಂಆರ್‌ಸಿಎಲ್‌ ಪ್ರಕಟಣೆ ಹೊರಡಿಸಿದೆ. ಈ ಮೂಲಕ ನಮ್ಮ ಮೆಟ್ರೋ ಹಸಿರು ಮಾರ್ಗದ ನಾಗಸಂದ್ರ ಮತ್ತು ರೇಷ್ಮೆ ಸಂಸ್ಥೆ ನಿಲ್ದಾಣದ ನಡುವೆ ಮೆಟ್ರೋ ರೈಲು ಸೇವೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಪೀಣ್ಯ ಇಂಡಸ್ಟ್ರಿ ಮತ್ತು ನಾಗಸಂದ್ರ ಮೆಟ್ರೋ ನಿಲ್ದಾಣಗಳ ನಡುವೆ ರೈಲು ಸೇವೆಗಳನ್ನು ಸ್ಥಗಿತಗೊಳಿಸಲಾಗುತ್ತದೆ. ಆಗಸ್ಟ್‌ 20, 23, 30 ರಂದು ಹಾಗೂ ಸೆಪ್ಟೆಂಬರ್ 6 ಮತ್ತು 11ರಂದು ಪೂರ್ಣ ದಿನ ರೈಲು ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಇನ್ನೂ ನಾಗಸಂದ್ರ ಮೆಟ್ರೋ ನಿಲ್ದಾಣದಿಂದ ಪೀಣ್ಯ ಇಂಡಸ್ಟ್ರಿ ಕಡೆಗೆ ಆಗಸ್ಟ್ 24 ರಂದು ಕೊನೆಯ ರೈಲು ಸೇವೆಯು ರಾತ್ರಿ 11.05 ಕ್ಕೆ ಬದಲಾಗಿ 10.00 ಗಂಟೆಗೆ ಪ್ರಾರಂಭವಾಗಲಿದೆ. ಇನ್ನೂ 25ರಂದು ಮೊದಲ ರೈಲು ಸೇವೆಯು ಬೆಳಗ್ಗೆ 5ರ ಬದಲಾಗಿ 06.00 ಕ್ಕೆ ಪ್ರಾರಂಭವಾಗಲಿದೆ.

Related Articles

Leave a Reply

Your email address will not be published. Required fields are marked *

Back to top button