ಪ್ರಮುಖ ಸುದ್ದಿ

ಆಕಸ್ಮಿಕವಾಗಿ ಕಾರಿಗೆ ಬೆಂಕಿ ನಾಲ್ವರು ಪ್ರಾಣಪಾಯದಿಂದ ಪಾರು

ಯಾದಗಿರಿಃ ಚಾಲಿತ ಕಾರಿನಲ್ಲಿ ತಾಂತ್ರಿಕ ದೋಷದಿಂದ ಇಂಡಿಕಾ ಕಾರೊಂದು ಬೆಂಕಿಗೆ ಆಹುತಿಯಾಗಿದ್ದು, ಕಾರಿನಲ್ಲಿದ್ದ ನಾಲ್ಚುರು ಪ್ರಾಣಪಾಯದಿಂದ ಪಾರಾದ ಘಟನೆ ಜಿಲ್ಲೆಯ ಶಹಾಪುರ ತಾಲೂಕಿನ ರಬನಳ್ಳಿ ಗ್ರಾಮದ ಹತ್ತಿರ ನಡೆದಿದೆ.

ಕಾರಿನಲ್ಲಿ ತಾಂತ್ರಿಕ ದೋಷದಿಂದ ಕಾಣಿಸಿಕೊಂಡ ಬೆಂಕಿಯಿಂದ ಇಡಿ ಕಾರು ಸುಟ್ಟು ಭಸ್ಮವಾಗಿದೆ. ಇಂಡಿಕಾ ಕಾರು ಮಲ್ಲಾ ವಡಿಗೇರಾದಿಂದ ಶಹಾಪುರ ಕಡೆ ಹೊರಟಿದ್ದು, ಕಾರಿನಲ್ಲಿದ್ದ ನಾಲ್ವರು ಪ್ರಯಾಣಿಕರು ಬೆಂಕಿ ತಗುಲಿದ ತಕ್ಷಣವೇ ಕಾರಿನಿಂದ ಇಳಿದಿದ್ದಾರೆ.

ವಿಶ್ವನಾಥ ಎಂಬುವವರಿಗೆ ಸೇರಿದ ಇಂಡಿಕಾ ವಿಸ್ತಾ ಕಾರ್ ಇದಾಗಿದ್ದು,. ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳದವರು ಆಗಮಿಸಿ ಬೆಂಕಿ ನಂದಿಸಿದ್ದಾರೆ.

ಸ್ಥಳಕ್ಕೆ ಗೋಗಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button